ಓದುಗರ ಪತ್ರ
ಬಳ್ಳಾರಿಯಲ್ಲಿ ನಡೆಯಲಿರುವ ೮೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಮಾಂಸಾಹಾರವನ್ನೂ ಒದಗಿಸಿ ಆಹಾರ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂದು ಬಳ್ಳಾರಿಯ ದ್ರಾವಿಡ ಕನ್ನಡಿಗರ ಚಳವಳಿ ಸಂಘಟನೆ ಬಳ್ಳಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಯಾವುದೇ ಕನ್ನಡ ಸಾಹಿತ್ಯ ಸಮ್ಮೇಳನಗಳು ‘ಮಾರಮ್ಮನ ಪರ’ ಅಲ್ಲ, ಸಾಹಿತ್ಯ ಸಮ್ಮೇಳನಗಳಲ್ಲಿ ಕನ್ನಡ ಭಾಷೆಯ ಅಳಿವು-ಉಳಿವು, ಕನ್ನಡ ಸಾಹಿತ್ಯ ಲೋಕಕ್ಕೆ ಸಂಬಂಧಿಸಿದಂತೆ ಚರ್ಚೆಗಳು, ಗೋಷ್ಠಿಗಳು ಕನ್ನಡದ ನೆಲ-ಜಲ ಸಂರಕ್ಷಣೆ ಯಲ್ಲಿ ಕನ್ನಡಿಗರ ಪಾತ್ರ, ಕನ್ನಡ ಪರ ಚಳವಳಿಗಳು, ನಶಿಸಿ ಹೋಗುತ್ತಿರುವ ಕನ್ನಡ ಶಾಲೆಗಳ ಉಳಿವು, ಇಂದು ರೈತರು ಅನುಭವಿಸುತ್ತಿರುವ ನೋವುಗಳು ಇವುಗಳ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ ಇವುಗಳ ಪರಿಹಾರಕ್ಕಾಗಿ ಸರ್ಕಾರದ ಗಮನಕ್ಕೆ ತರುವುದು ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ. ಊಟ ಕೇವಲ ನೆಪ ಮಾತ್ರ ಆಗಬೇಕು. ಊಟಕ್ಕೆ ಪ್ರಾಧ್ಯಾನತೆ ಕೊಟ್ಟರೆ ಸಾಹಿತ್ಯ ಸಮ್ಮೇಳನಕ್ಕೆ ಯಾವ ಅರ್ಥವೂ ಇರುವುದಿಲ್ಲ, ಮಂಡ್ಯದಲ್ಲಿ ನಡೆದ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನೀಡುವ ಬಗ್ಗೆ ಪರ-ವಿರುದ್ಧ ಚರ್ಚೆಗಳು ನಡೆದವು, ಕಡೆಗೂ ಸಮ್ಮೇಳನದ ಕಡೆ ದಿನ ಮೊಟ್ಟೆ ನೀಡಲಾಯಿತು, ಕನ್ನಡ ಸಾಹಿತ್ಯ ಸಮ್ಮೇಳನಗಳು ಊಟದ ಜಾತ್ರೆಗಳಾಗಬಾರದು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…