Andolana originals

ಓದುಗರ ಪತ್ರ:  ಸಾಹಿತ್ಯ ಸಮ್ಮೇಳನ ಊಟದ ಜಾತ್ರೆಗಳಾಗದಿರಲಿ

ಬಳ್ಳಾರಿಯಲ್ಲಿ ನಡೆಯಲಿರುವ ೮೮ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ಮಾಂಸಾಹಾರವನ್ನೂ ಒದಗಿಸಿ ಆಹಾರ ಸಮಾನತೆಯನ್ನು ಕಾಯ್ದುಕೊಳ್ಳಬೇಕು ಎಂದು ಬಳ್ಳಾರಿಯ ದ್ರಾವಿಡ ಕನ್ನಡಿಗರ ಚಳವಳಿ ಸಂಘಟನೆ ಬಳ್ಳಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಯಾವುದೇ ಕನ್ನಡ ಸಾಹಿತ್ಯ ಸಮ್ಮೇಳನಗಳು ‘ಮಾರಮ್ಮನ ಪರ’ ಅಲ್ಲ, ಸಾಹಿತ್ಯ ಸಮ್ಮೇಳನಗಳಲ್ಲಿ ಕನ್ನಡ ಭಾಷೆಯ ಅಳಿವು-ಉಳಿವು, ಕನ್ನಡ ಸಾಹಿತ್ಯ ಲೋಕಕ್ಕೆ ಸಂಬಂಧಿಸಿದಂತೆ ಚರ್ಚೆಗಳು, ಗೋಷ್ಠಿಗಳು ಕನ್ನಡದ ನೆಲ-ಜಲ ಸಂರಕ್ಷಣೆ ಯಲ್ಲಿ ಕನ್ನಡಿಗರ ಪಾತ್ರ, ಕನ್ನಡ ಪರ ಚಳವಳಿಗಳು, ನಶಿಸಿ ಹೋಗುತ್ತಿರುವ ಕನ್ನಡ ಶಾಲೆಗಳ ಉಳಿವು, ಇಂದು ರೈತರು ಅನುಭವಿಸುತ್ತಿರುವ ನೋವುಗಳು ಇವುಗಳ ಬಗ್ಗೆ ಕೂಲಂಕಷವಾಗಿ ಚರ್ಚೆ ನಡೆಸಿ ಇವುಗಳ ಪರಿಹಾರಕ್ಕಾಗಿ ಸರ್ಕಾರದ ಗಮನಕ್ಕೆ ತರುವುದು ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ಉದ್ದೇಶ. ಊಟ ಕೇವಲ ನೆಪ ಮಾತ್ರ ಆಗಬೇಕು. ಊಟಕ್ಕೆ ಪ್ರಾಧ್ಯಾನತೆ ಕೊಟ್ಟರೆ ಸಾಹಿತ್ಯ ಸಮ್ಮೇಳನಕ್ಕೆ ಯಾವ ಅರ್ಥವೂ ಇರುವುದಿಲ್ಲ, ಮಂಡ್ಯದಲ್ಲಿ ನಡೆದ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನೀಡುವ ಬಗ್ಗೆ ಪರ-ವಿರುದ್ಧ ಚರ್ಚೆಗಳು ನಡೆದವು, ಕಡೆಗೂ ಸಮ್ಮೇಳನದ ಕಡೆ ದಿನ ಮೊಟ್ಟೆ ನೀಡಲಾಯಿತು, ಕನ್ನಡ ಸಾಹಿತ್ಯ ಸಮ್ಮೇಳನಗಳು ಊಟದ ಜಾತ್ರೆಗಳಾಗಬಾರದು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago