ಓದುಗರ ಪತ್ರ
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು ಜೋರಾಗಿರುತ್ತವೆ. ಈ ಸಂಭ್ರಮ ಕೇವಲ ಆ ಒಂದು ದಿನಕ್ಕೆ ಮಾತ್ರ ಸೀಮಿತವಾಗುತ್ತಿದೆಯಾ ಅಥವಾ ಇದರ ಆಳವನ್ನು ನಾವು ನಿಜಕ್ಕೂ ಅರ್ಥ ಮಾಡಿಕೊಳ್ಳುತ್ತಿದ್ದೀವಾ ಎಂದು ಒಮ್ಮೆ ಯೋಚಿಸಬೇಕು.
ಈ ಸ್ವಾತಂತ್ರ್ಯದ ಹಿಂದೆ ಎಷ್ಟೋ ಮಹನೀಯರ ತ್ಯಾಗ ಮತ್ತು ಬಲಿದಾನವಿದೆ. ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಾರ್ಗ, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ನೂರಾರು ಜನ ತಮ್ಮ ಕಷ್ಟ-ಸುಖಗಳನ್ನು ಬದಿಗಿಟ್ಟು, ದೇಶಕ್ಕಾಗಿ ಜೀವನ, ಪ್ರಾಣವನ್ನೇ ಅರ್ಪಿಸಿದ್ದಾರೆ. ಅವರ ಆ ತ್ಯಾಗದ ಫಲವಾಗಿಯೇ ಇಂದು ನಾವು ತಲೆಎತ್ತಿ ಬದುಕುತ್ತಿದ್ದೇವೆ. ಬರೀ ಧ್ವಜ ಹಾರಿಸಿ, ಚಾಕೊಲೇಟ್ ಕೊಟ್ಟು ಮುಗಿಸುವುದಲ್ಲ. ಶಾಲೆಗಳಲ್ಲಿ ಮಕ್ಕಳಿಗೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕಥೆಗಳನ್ನು ಸರಳವಾಗಿ ತಿಳಿಸಿಕೊಡಬೇಕು. ಆ ಮಹನೀಯರು ನಡೆದುಬಂದ ಹಾದಿ, ಅವರ ಶಿಸ್ತು ಮತ್ತು ದೇಶಪ್ರೇಮವನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಶಿಕ್ಷಕರು ಹಾಗೂ ಪೋಷಕರು ಮಾರ್ಗದರ್ಶನ ಮಾಡಬೇಕು. ಹಿರಿಯರು ಕಷ್ಟಪಟ್ಟು ದೊರಕಿಸಿಕೊಟ್ಟಿರುವ ಈ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ಹೋಗುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಸ್ವಾತಂತ್ರ್ಯ ದಿನಾಚರಣೆ ಬರೀ ಒಂದು ದಿನದ ಭಾಷಣಕ್ಕೆ ಸೀಮಿತವಾಗಬಾರದು. ಬದಲಿಗೆ, ನಮ್ಮ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು, ಪರಸ್ಪರ ಪ್ರೀತಿಯಿಂದ ಬಾಳುವುದು, ದೇಶದ ಕಾನೂನನ್ನು ಗೌರವಿಸುವುದು ಮತ್ತು ಒಳ್ಳೆಯ ಪ್ರಜೆಗಳಾಗಿ ಬದುಕುವುದು – ಇವೆಲ್ಲವೂ ಆ ಮಹನೀಯರಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗುತ್ತದೆ.
– ಬಿ. ಗಣೇಶ, ಮೈಸೂರು
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…