Andolana originals

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ ಕ್ಷಣವೂ ಬದುಕಲಾರದ ನಾವು, ಅಹಂಕಾರದ ಭರಾಟೆಯಲ್ಲಿ ಪ್ರಕೃತಿಯನ್ನು ಕಡೆಗಣಿಸುತ್ತಿರುವುದರ ಪರಿಣಾಮವೇ ಇಂದಿನ ಬರಗಾಲದ ಸೂಚನೆ.

ಮತ್ತೊಂದೆಡೆ, ಸಮಾಜದಲ್ಲಿ ಹೆಚ್ಚುತ್ತಿರುವ ಕೊಲೆ, ಸುಲಿಗೆಗಳಂತಹ ಕೃತ್ಯಗಳು ನಮ್ಮ ಆಂತರಿಕ ಮೌಲ್ಯಗಳ ಕುಸಿತಕ್ಕೆ ಸಾಕ್ಷಿಯಾಗಿವೆ. ನಾನೇ ಎಲ್ಲ ಎಂಬ ಭ್ರಮೆ ನಮ್ಮಲ್ಲಿ ಮೂಡಿದಾಗ ಮಾನವೀಯತೆ ನಾಶವಾಗುತ್ತದೆ. ತಂದೆ-ತಾಯಿ, ಗುರುಹಿರಿಯರು ಮತ್ತು ಸಮಾಜವನ್ನು ಗೌರವಿಸುವ ಗುಣ ನಮ್ಮಲ್ಲಿರಬೇಕು. ಪ್ರಕೃತಿಯನ್ನು ನಾವು ಕಾಪಾಡಿದರೆ, ನಾಳೆ ಅದು ನಮ್ಮನ್ನು ಕಾಪಾಡುತ್ತದೆ. ಗಿಡಗಳನ್ನು ನೆಟ್ಟು ಪೋಷಿಸುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಮುಂದಿನ ಪೀಳಿಗೆಗೆ ನಾವು ನೀಡಬೇಕಾದ ಅತಿದೊಡ್ಡ ಆಸ್ತಿ ಹಣವಲ್ಲ, ಬದಲಾಗಿ ಪರಿಸರ ಪ್ರe ಮತ್ತು ಸಂಸ್ಕಾರ. ಈ ಸುಂದರ ಬದುಕಿನಲ್ಲಿ ದ್ವೇಷಕ್ಕೆ ಜಗವಿಲ್ಲ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಾ, ಅಹಂಕಾರವಿಲ್ಲದೆ ಪ್ರೀತಿ ಮತ್ತು ಕೃತಜ್ಞತೆಯಿಂದ ಬದುಕಿದಾಗ ಮಾತ್ರ ನಮಗೆ ನಿಜವಾದ ಶಾಂತಿ ಹಾಗೂ ಸಾರ್ಥಕತೆ ಲಭಿಸಲು ಸಾಧ್ಯ.

– ಬಿ. ಗಣೇಶ , ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

4 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

14 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

19 mins ago