ಓದುಗರ ಪತ್ರ
ಮಹಾರಾಷ್ಟ್ರದಲ್ಲಿ ಇನ್ನು ಮುಂದೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ಆದೇಶ ಜಾರಿಗೆ ತಂದಿದ್ದು, ನಿಯಮವನ್ನು ಉಲ್ಲಂಸಿದವರ ವಿರುದ್ಧ ಶಿಸ್ತು ಕ್ರಮ ಜರು ಗಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ಆದೇಶವನ್ನು ರಾಜ್ಯಾದ್ಯಂತ ಸ್ವಾಗತಿಸಲಾಗಿದೆ. ಕರ್ನಾಟಕದಲ್ಲಿ ಇಂಗ್ಲಿಷ್ ವ್ಯಾಮೋಹವಿರುವಂತೆ ಮಹಾರಾಷ್ಟ್ರದಲ್ಲಿಯೂ ಹಿಂದಿ ಭಾಷೆಯ ದಬ್ಬಾಳಿಕೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಅಲ್ಲಿನ ಸರ್ಕಾರ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಮರಾಠಿ ಭಾಷೆ ಮಾತನಾಡಬೇಕು ಎಂಬ ನಿಯಮವನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸರೋಜಿನಿ ಮಹಿಷಿ ವರದಿ ಜಾರಿಯಾಗಿಲ್ಲ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಮಂಡನೆಗಾಗಿ ಕಾಯುತ್ತಿರುವಾಗ, ಮಹಾರಾಷ್ಟ್ರ ಸರ್ಕಾರ ಸದ್ದಿಲ್ಲದೇ ಮರಾಠಿ ಭಾಷೆಯ ಪರವಾಗಿ ನಿಂತಿರುವುದು ಕರ್ನಾಟಕ ಸರ್ಕಾರದ ಕಣ್ಣು ತೆರೆಸಬೇಕು. ರಾಜ್ಯ ಸರ್ಕಾರ ಭಾಷಾ ವಿಷಯದಲ್ಲಿ ಮಹಾರಾಷ್ಟ್ರದ ಕ್ರಮವನ್ನು ಪಾಲಿಸಬೇಕು. ಬಹುಶಃ ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲೂ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ನಿಯಮ ಜಾರಿಗೆ ಬರುವ ದಿನಗಳು ದೂರವಿಲ್ಲ ಅನಿಸುತ್ತದೆ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…