ಓದುಗರ ಪತ್ರ
ಮಹಾರಾಷ್ಟ್ರದಲ್ಲಿ ಇನ್ನು ಮುಂದೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ಆದೇಶ ಜಾರಿಗೆ ತಂದಿದ್ದು, ನಿಯಮವನ್ನು ಉಲ್ಲಂಸಿದವರ ವಿರುದ್ಧ ಶಿಸ್ತು ಕ್ರಮ ಜರು ಗಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ಆದೇಶವನ್ನು ರಾಜ್ಯಾದ್ಯಂತ ಸ್ವಾಗತಿಸಲಾಗಿದೆ. ಕರ್ನಾಟಕದಲ್ಲಿ ಇಂಗ್ಲಿಷ್ ವ್ಯಾಮೋಹವಿರುವಂತೆ ಮಹಾರಾಷ್ಟ್ರದಲ್ಲಿಯೂ ಹಿಂದಿ ಭಾಷೆಯ ದಬ್ಬಾಳಿಕೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಅಲ್ಲಿನ ಸರ್ಕಾರ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಮರಾಠಿ ಭಾಷೆ ಮಾತನಾಡಬೇಕು ಎಂಬ ನಿಯಮವನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸರೋಜಿನಿ ಮಹಿಷಿ ವರದಿ ಜಾರಿಯಾಗಿಲ್ಲ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಮಂಡನೆಗಾಗಿ ಕಾಯುತ್ತಿರುವಾಗ, ಮಹಾರಾಷ್ಟ್ರ ಸರ್ಕಾರ ಸದ್ದಿಲ್ಲದೇ ಮರಾಠಿ ಭಾಷೆಯ ಪರವಾಗಿ ನಿಂತಿರುವುದು ಕರ್ನಾಟಕ ಸರ್ಕಾರದ ಕಣ್ಣು ತೆರೆಸಬೇಕು. ರಾಜ್ಯ ಸರ್ಕಾರ ಭಾಷಾ ವಿಷಯದಲ್ಲಿ ಮಹಾರಾಷ್ಟ್ರದ ಕ್ರಮವನ್ನು ಪಾಲಿಸಬೇಕು. ಬಹುಶಃ ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲೂ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ನಿಯಮ ಜಾರಿಗೆ ಬರುವ ದಿನಗಳು ದೂರವಿಲ್ಲ ಅನಿಸುತ್ತದೆ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…
ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…