Andolana originals

ಓದುಗರ ಪತ್ರ: ಮಹಾರಾಷ್ಟ್ರ ಸರ್ಕಾರದ ಕ್ರಮ ಶ್ಲಾಘನೀಯ

ಮಹಾರಾಷ್ಟ್ರದಲ್ಲಿ ಇನ್ನು ಮುಂದೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ಆದೇಶ ಜಾರಿಗೆ ತಂದಿದ್ದು, ನಿಯಮವನ್ನು ಉಲ್ಲಂಸಿದವರ ವಿರುದ್ಧ ಶಿಸ್ತು ಕ್ರಮ ಜರು ಗಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಈ ಆದೇಶವನ್ನು ರಾಜ್ಯಾದ್ಯಂತ ಸ್ವಾಗತಿಸಲಾಗಿದೆ. ಕರ್ನಾಟಕದಲ್ಲಿ ಇಂಗ್ಲಿಷ್ ವ್ಯಾಮೋಹವಿರುವಂತೆ ಮಹಾರಾಷ್ಟ್ರದಲ್ಲಿಯೂ ಹಿಂದಿ ಭಾಷೆಯ ದಬ್ಬಾಳಿಕೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಅಲ್ಲಿನ ಸರ್ಕಾರ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಮರಾಠಿ ಭಾಷೆ ಮಾತನಾಡಬೇಕು ಎಂಬ ನಿಯಮವನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸರೋಜಿನಿ ಮಹಿಷಿ ವರದಿ ಜಾರಿಯಾಗಿಲ್ಲ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಮಂಡನೆಗಾಗಿ ಕಾಯುತ್ತಿರುವಾಗ, ಮಹಾರಾಷ್ಟ್ರ ಸರ್ಕಾರ ಸದ್ದಿಲ್ಲದೇ ಮರಾಠಿ ಭಾಷೆಯ ಪರವಾಗಿ ನಿಂತಿರುವುದು ಕರ್ನಾಟಕ ಸರ್ಕಾರದ ಕಣ್ಣು ತೆರೆಸಬೇಕು. ರಾಜ್ಯ ಸರ್ಕಾರ ಭಾಷಾ ವಿಷಯದಲ್ಲಿ ಮಹಾರಾಷ್ಟ್ರದ ಕ್ರಮವನ್ನು ಪಾಲಿಸಬೇಕು. ಬಹುಶಃ ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲೂ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ನಿಯಮ ಜಾರಿಗೆ ಬರುವ ದಿನಗಳು ದೂರವಿಲ್ಲ ಅನಿಸುತ್ತದೆ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago