ಓದುಗರ ಪತ್ರ
ಮಹಾರಾಷ್ಟ್ರದಲ್ಲಿ ಇನ್ನು ಮುಂದೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ಆದೇಶ ಜಾರಿಗೆ ತಂದಿದ್ದು, ನಿಯಮವನ್ನು ಉಲ್ಲಂಸಿದವರ ವಿರುದ್ಧ ಶಿಸ್ತು ಕ್ರಮ ಜರು ಗಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ ಈ ಆದೇಶವನ್ನು ರಾಜ್ಯಾದ್ಯಂತ ಸ್ವಾಗತಿಸಲಾಗಿದೆ. ಕರ್ನಾಟಕದಲ್ಲಿ ಇಂಗ್ಲಿಷ್ ವ್ಯಾಮೋಹವಿರುವಂತೆ ಮಹಾರಾಷ್ಟ್ರದಲ್ಲಿಯೂ ಹಿಂದಿ ಭಾಷೆಯ ದಬ್ಬಾಳಿಕೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಅಲ್ಲಿನ ಸರ್ಕಾರ ಎಲ್ಲ ಸರ್ಕಾರಿ ಕಚೇರಿಗಳಲ್ಲಿಯೂ ಮರಾಠಿ ಭಾಷೆ ಮಾತನಾಡಬೇಕು ಎಂಬ ನಿಯಮವನ್ನು ಜಾರಿಗೆ ತಂದಿದೆ. ಕರ್ನಾಟಕದಲ್ಲಿ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸರೋಜಿನಿ ಮಹಿಷಿ ವರದಿ ಜಾರಿಯಾಗಿಲ್ಲ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಸೂದೆ ಮಂಡನೆಗಾಗಿ ಕಾಯುತ್ತಿರುವಾಗ, ಮಹಾರಾಷ್ಟ್ರ ಸರ್ಕಾರ ಸದ್ದಿಲ್ಲದೇ ಮರಾಠಿ ಭಾಷೆಯ ಪರವಾಗಿ ನಿಂತಿರುವುದು ಕರ್ನಾಟಕ ಸರ್ಕಾರದ ಕಣ್ಣು ತೆರೆಸಬೇಕು. ರಾಜ್ಯ ಸರ್ಕಾರ ಭಾಷಾ ವಿಷಯದಲ್ಲಿ ಮಹಾರಾಷ್ಟ್ರದ ಕ್ರಮವನ್ನು ಪಾಲಿಸಬೇಕು. ಬಹುಶಃ ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಸ್ಥಳಗಳಲ್ಲೂ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ನಿಯಮ ಜಾರಿಗೆ ಬರುವ ದಿನಗಳು ದೂರವಿಲ್ಲ ಅನಿಸುತ್ತದೆ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…