Categories: Andolana originals

ಓದುಗರ ಪತ್ರ: ಮಹಿಳೆಯರಿಂದಲೇ ಮಹಾಯುತಿಗೆ ಗೆಲುವು

ಕರ್ನಾಟಕದ ವಿಧಾನಸಭಾ ಚುನಾವಣಾ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ ಬಿಜೆಪಿಗೆ ಈಗ ಅದೇ ಮಾದರಿಯ ಗ್ಯಾರಂಟಿ ಯೋಜನೆಗಳು ಮಹಾರಾಷ್ಟ್ರದಲ್ಲಿ ಕೈಹಿಡಿದಿವೆ.

ಮಹಾರಾಷ್ಟ್ರದಲ್ಲಿ ಮಹಿಳೆಯರಿಗೆ ‘ಲಾಡಕಿ, ಬಹಿನ್’ ಯೋಜನೆಯಡಿ ಮಾಸಿಕ 1,500 ರೂ.ಗಳನ್ನು ನೀಡುತ್ತಿರುವುದು ಈಗ ಬಿಜೆಪಿಗೆ ಗೆಲುವು ತಂದುಕೊಟ್ಟಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಹೊತ್ತಿಗಾಗಲೇ ಅಲ್ಲಿನ 2.50 ಕೋಟಿಗೂ ಹೆಚ್ಚು ಮಹಿಳೆಯರು 5 ಕಂತುಗಳಲ್ಲಿ 1,500 ರೂ. ಹಣ ಪಡೆದುಕೊಂಡಿದ್ದರು. ಅಲ್ಲದೆ ಚುನಾವಣೆ ಹತ್ತಿರ ಬರುತ್ತಿದ್ದಂತೆ 1,500 ರೂ.ಗಳನ್ನು 2,100 ರೂ.ಗಳಿಗೆ ಏರಿಸುವ ಭರವಸೆ ನೀಡಿದ ಬಿಜೆಪಿ ಮಹಿಳೆಯರ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರ ಪರಿಣಾಮವೋ ಏನೋ 2019ರ ಮಹಿಳಾ ಮತದಾನದ ಸರಾಸರಿಗಿಂತ ಈ ಬಾರಿ 53 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತದಾನ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಅಸ್ತ್ರವನ್ನು ಪ್ರಯೋಗಿಸಿ ಜಜೆಪಿ ಸಫಲತೆ ಕಂಡಿದೆ. ಇದೇ ಪಕ್ಷ ಕರ್ನಾಟಕದಲ್ಲಿ ಕಾಂಗ್ರೆಸ್ ಗೆದ್ದಾಗ “ಬಿಟ್ಟಿ ಭಾಗ್ಯಗಳನ್ನು ನೀಡಿ ಗೆದ್ದಿದ್ದಾರೆ’ ಎಂದು ಲೇವಡಿ ಮಾಡಿತ್ತು. ಈಗ ಬಿಜೆಪಿಯೂ ಅದೇ ಸೂತ್ರಕ್ಕೆ ಶರಣಾಗಿರುವುದನ್ನು ನೋಡಿದರೆ ಬಿಜೆಪಿ ‘ನಾವು ಮಾಡಿದರೆ ಸರಿ, ಬೇರೆಯವರು ಮಾಡಿದರೆ ತಮ್ಮ’ ಎಂಬಂತೆ ವರ್ತಿಸಿದಂತಿದೆ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

19 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

19 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

19 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

19 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

20 hours ago