ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ರುವ ಗ್ರಂಥಾಲಯದಲ್ಲಿ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಪುಸ್ತಕಗಳು ಹಾಳಾಗುತ್ತಿವೆ.
ಈ ಗ್ರಂಥಾಲಯದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಪುಸ್ತಕಗಳಿವೆ. ಆದರೆ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಅವು ವಿದ್ಯಾರ್ಥಿಗಳಿಗೆ ಸರಿಯಾಗಿ ಲಭ್ಯವಾಗುತ್ತಿಲ್ಲ. ಇಲ್ಲಿನ ಎಲ್ಲ ಪುಸ್ತಕಗಳಿಗೂ ಬಾರ್ಕೊಡ್ಗಳನ್ನು ನೀಡಲಾಗಿದ್ದು, ಅವುಗಳನ್ನು ಸರಿಯಾಗಿ ನಿರ್ವಹಿಸಲು ಇಲ್ಲಿನ ಸಿಬ್ಬಂದಿ ವಿಫಲರಾಗಿದ್ದಾರೆ. ಇದರಿಂದಾಗಿ ಪುಸ್ತಕಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಹರಿದುಹೋಗುತ್ತಿವೆ. ಅಲ್ಲದೆ ಭಾನುವಾರದಂದು ಇಲ್ಲಿನ ಸಿಬ್ಬಂದಿ ಓದುಗ ರೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡುವ ಜತೆಗೆ ಓದುಗ ರೊಂದಿಗೆ ಸರಿಯಾಗಿ ಸ್ಪಂದಿಸುವಂತೆ ಇಲ್ಲಿನ ಸಿಬ್ಬಂದಿಗೆ ಸೂಚನೆ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…