ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ರುವ ಗ್ರಂಥಾಲಯದಲ್ಲಿ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಪುಸ್ತಕಗಳು ಹಾಳಾಗುತ್ತಿವೆ.
ಈ ಗ್ರಂಥಾಲಯದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಪುಸ್ತಕಗಳಿವೆ. ಆದರೆ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಅವು ವಿದ್ಯಾರ್ಥಿಗಳಿಗೆ ಸರಿಯಾಗಿ ಲಭ್ಯವಾಗುತ್ತಿಲ್ಲ. ಇಲ್ಲಿನ ಎಲ್ಲ ಪುಸ್ತಕಗಳಿಗೂ ಬಾರ್ಕೊಡ್ಗಳನ್ನು ನೀಡಲಾಗಿದ್ದು, ಅವುಗಳನ್ನು ಸರಿಯಾಗಿ ನಿರ್ವಹಿಸಲು ಇಲ್ಲಿನ ಸಿಬ್ಬಂದಿ ವಿಫಲರಾಗಿದ್ದಾರೆ. ಇದರಿಂದಾಗಿ ಪುಸ್ತಕಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಹರಿದುಹೋಗುತ್ತಿವೆ. ಅಲ್ಲದೆ ಭಾನುವಾರದಂದು ಇಲ್ಲಿನ ಸಿಬ್ಬಂದಿ ಓದುಗ ರೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡುವ ಜತೆಗೆ ಓದುಗ ರೊಂದಿಗೆ ಸರಿಯಾಗಿ ಸ್ಪಂದಿಸುವಂತೆ ಇಲ್ಲಿನ ಸಿಬ್ಬಂದಿಗೆ ಸೂಚನೆ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…