ಓದುಗರ ಪತ್ರ
ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ಮತ್ತು ಉದ್ಯಾನವನದ ಸನಿಹದಲ್ಲಿರುವ ರಸ್ತೆಯಲ್ಲಿ ಅಕ್ಕ ಪಕ್ಕದಲ್ಲಿರುವ ಮನೆಯವರು ಮೈಸೂರು ನಗರದ ಪಾಲಿಕೆಯ ಕಸದ ವಾಹನಕ್ಕೆ ಕಸ ಕೊಡದೆ, ರಾತ್ರಿ ವೇಳೆ ಕಾಲೇಜಿನ ಮುಂಭಾಗದಲ್ಲಿ ಸುರಿದು ಹೋಗುತ್ತಿದ್ದಾರೆ. ಇದೇ ರಸ್ತೆಯಲ್ಲಿ ಜ್ಯೋತಿ ಶಿಕ್ಷಣ ಸಂಸ್ಥೆಯೂ ಇರುವುದರಿಂದ ನೂರಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಅಧ್ಯಾಪಕರು, ಉಪನ್ಯಾಸಕರು ಕಸದ ದುರ್ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡು ಓಡಾಡುವುದು ಅನಿವಾರ್ಯವಾಗಿದೆ. ಬೆಳಗಿನ ಹಾಗೂ ಸಂಜೆ ವೇಳೆ ವಾಯುವಿಹಾರ ಮಾಡುವವರಿಗೂ ಕಸದ ದುರ್ವಾಸನೆಯಿಂದಾಗಿ ಕಿರಿಕಿರಿಯಾಗುತ್ತಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತ ಗಮನ ಹರಿಸಿ ಕಸ ಸಂಗ್ರಹಿಸುವ ಪಾಲಿಕೆಯ ವಾಹನಕ್ಕೆ ಕಸವನ್ನು ನೀಡುವಂತೆ ಸಾರ್ವಜನಿಕರಿಗೆ ಸೂಚನೆ ನೀಡಬೇಕು. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…