ಓದುಗರ ಪತ್ರ
ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ಮತ್ತು ಉದ್ಯಾನವನದ ಸನಿಹದಲ್ಲಿರುವ ರಸ್ತೆಯಲ್ಲಿ ಅಕ್ಕ ಪಕ್ಕದಲ್ಲಿರುವ ಮನೆಯವರು ಮೈಸೂರು ನಗರದ ಪಾಲಿಕೆಯ ಕಸದ ವಾಹನಕ್ಕೆ ಕಸ ಕೊಡದೆ, ರಾತ್ರಿ ವೇಳೆ ಕಾಲೇಜಿನ ಮುಂಭಾಗದಲ್ಲಿ ಸುರಿದು ಹೋಗುತ್ತಿದ್ದಾರೆ. ಇದೇ ರಸ್ತೆಯಲ್ಲಿ ಜ್ಯೋತಿ ಶಿಕ್ಷಣ ಸಂಸ್ಥೆಯೂ ಇರುವುದರಿಂದ ನೂರಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಅಧ್ಯಾಪಕರು, ಉಪನ್ಯಾಸಕರು ಕಸದ ದುರ್ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡು ಓಡಾಡುವುದು ಅನಿವಾರ್ಯವಾಗಿದೆ. ಬೆಳಗಿನ ಹಾಗೂ ಸಂಜೆ ವೇಳೆ ವಾಯುವಿಹಾರ ಮಾಡುವವರಿಗೂ ಕಸದ ದುರ್ವಾಸನೆಯಿಂದಾಗಿ ಕಿರಿಕಿರಿಯಾಗುತ್ತಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಇತ್ತ ಗಮನ ಹರಿಸಿ ಕಸ ಸಂಗ್ರಹಿಸುವ ಪಾಲಿಕೆಯ ವಾಹನಕ್ಕೆ ಕಸವನ್ನು ನೀಡುವಂತೆ ಸಾರ್ವಜನಿಕರಿಗೆ ಸೂಚನೆ ನೀಡಬೇಕು. ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…
ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ…
ಮಡಿಕೇರಿ: ರಾಜ್ಯದಲ್ಲಿ ಮಳೆಯ ನಡುವೆಯೇ ವಾಯು ಗುಣಮಟ್ಟದಲ್ಲಿ ಬದಲಾವಣೆ ಕಂಡಿದ್ದು, ಬೆಂಗಳೂರಿನಲ್ಲಿ ಇಂದು 75 AQI ನೊಂದಿಗೆ ಸಾಧಾರಣ ಗಾಳಿ…