Mysore
26
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ನದಿ ತೀರದಲ್ಲಿ ಸ್ವಚ್ಛತೆ ಕಾಪಾಡಿ

ಓದುಗರ ಪತ್ರ

ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ ನದಿ ಮಲಿನವಾಗುತ್ತಿದೆ. ಈ ನೀರನ್ನು ಬಳಸುವವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಜಲಚರಗಳಿಗೂ ಮಾರಕವಾಗಿದೆ. ನದಿಗಳನ್ನು ಮನುಕುಲದ ಜೀವನಾಡಿ ಎಂದು ಕರೆಯುತ್ತೇವೆ. ನಮ್ಮ ದೇಶದಲ್ಲಿ ನದಿಗಳಿಗೆ ಪೂಜ್ಯ ಸ್ಥಾನವನ್ನು ನೀಡಲಾಗಿದೆ. ಬೇಡವಾದ ವಸ್ತುಗಳನ್ನು ನದಿಗಳಿಗೆ ಎಸೆಯದೇ ಸ್ವಚ್ಛತೆ ಕಾಪಾಡುವ ಮೂಲಕ ನದಿಗಳ ಪಾವಿತ್ರ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ.

– ಎಂ.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.

Tags:
error: Content is protected !!