Andolana originals

ಓದುಗರ ಪತ್ರ: ಸಾಹಿತ್ಯ ಸಮ್ಮೇಳನದ ಊಟದಲ್ಲಿ ತಾರತಮ್ಯವೇಕೆ?

ಡಿಸೆಂಬರ್ ೨೧, ೨೨, ಮತ್ತು ೨೩ರಂದು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಗಣ್ಯರು, ಮುಖ್ಯ ಅತಿಥಿಗಳು ಮತ್ತು ಇತರೆ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಬೇರೆ-ಬೇರೆ ರೀತಿಯ ಊಟದ ವ್ಯವಸ್ಥೆ ಮಾಡಿರುವುದಾಗಿ ಸಮ್ಮೇಳನದ ಆಹಾರ ಸಮಿತಿಯವರು ಮಾಧ್ಯಮಗಳ ಮುಂದೆಯೇ ಹೇಳಿಕೆ ನೀಡಿದ್ದು, ಅದರ ಮೆನುವನ್ನೂ ಪತ್ರಿಕೆಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರೂ ಕನ್ನಡಾಭಿಮಾನಿಗಳು ಎಂದಾದ ಮೇಲೆ ಈ ತಾರತಮ್ಯದ ಅಗತ್ಯವಿತ್ತೆ? ಇಲ್ಲಿ ಗಣ್ಯರು ಮತ್ತು ಮುಖ್ಯ ಅತಿಥಿಗಳಿಗೆ ಸ್ಟಾರ್ ಹೋಟೆಲಿನ ಮಾದರಿಯಲ್ಲಿ ಆಹಾರದ ಮೆನು ಸಿದ್ಧಪಡಿಸಲಾಗಿದೆ. ಇತರೆ ಪ್ರತಿನಿಽಗಳಿಗೆ ಬೇರೆ ಮಾದರಿಯ ಆಹಾರದ ಮೆನು ತಯಾರಿಸಲಾಗಿದೆ. ತಿನ್ನುವ ಆಹಾರದಲ್ಲಿ ಈ ರೀತಿಯ ಭೇದ-ಭಾವ ಮಾಡಿರುವುದು ಭಾಗವಹಿಸುತ್ತಿರುವ ಪ್ರತಿನಿಧಿಗಳಿಗೆ ಮಾಡಿರುವ ಅಪಮಾನವಲ್ಲವೇ? ಕನ್ನಡ ಸಾಹಿತ್ಯ ಸಮ್ಮೇಳನಗಳು ಎಂದರೆ ಭಾಗವಹಿಸುವ ಎಲ್ಲರನ್ನೂ ಮೊದಲು ಕನ್ನಡದ ಅಭಿಮಾನಿಗಳು ಎಂದು ಭಾವಿಸಬೇಕು.

ಆನಂತರ ಅವರನ್ನು ಅತಿಥಿಗಳು, ಮುಖ್ಯ ಅತಿಥಿಗಳು ಎಂದು ಪರಿಗಣಿಸಬೇಕು. ಆದರೆ ಇಲ್ಲಿ ಭಾಗವಹಿಸುವ ಪ್ರತಿನಿಽಗಳು ಮತ್ತು ಸಾರ್ವಜನಿಕರನ್ನು ಎರಡನೇ ದರ್ಜೆಯ ಮನುಷ್ಯರಂತೆ ಕಾಣುತ್ತಿದ್ದು, ಈ ತಾರತಮ್ಯ ಒಳ್ಳೆಯ ಬೆಳವಣಿಗೆಯಲ್ಲ. ಇದು ಸಾರ್ವಜನಿಕ ಕಾರ್ಯಕ್ರಮವಾಗಿರುವುದರಿಂದ ಎಲ್ಲರನ್ನೂ ಒಂದೇ ಎಂದು ಪರಿಗಣಿಸ ಬೇಕು. ಆದ್ದರಿಂದ ಕಸಾಪ ಈ ಬಗ್ಗೆ ಗಮನಹರಿಸಿ ಸಮ್ಮೇಳನದಲ್ಲಿ ಭಾಗವಹಿಸವ ಎಲ್ಲರಿಗೂ ಒಂದೇ ಮಾದರಿಯಲ್ಲಿ ಊಟದ ವ್ಯವಸ್ಥೆ ಮಾಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

andolana

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

8 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

9 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

10 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

10 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

10 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

10 hours ago