Andolana originals

ಓದುಗರ ಪತ್ರ: ಸಾಹಿತ್ಯ ಸಮ್ಮೇಳನದ ಊಟದಲ್ಲಿ ತಾರತಮ್ಯವೇಕೆ?

ಡಿಸೆಂಬರ್ ೨೧, ೨೨, ಮತ್ತು ೨೩ರಂದು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಗಣ್ಯರು, ಮುಖ್ಯ ಅತಿಥಿಗಳು ಮತ್ತು ಇತರೆ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಬೇರೆ-ಬೇರೆ ರೀತಿಯ ಊಟದ ವ್ಯವಸ್ಥೆ ಮಾಡಿರುವುದಾಗಿ ಸಮ್ಮೇಳನದ ಆಹಾರ ಸಮಿತಿಯವರು ಮಾಧ್ಯಮಗಳ ಮುಂದೆಯೇ ಹೇಳಿಕೆ ನೀಡಿದ್ದು, ಅದರ ಮೆನುವನ್ನೂ ಪತ್ರಿಕೆಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರೂ ಕನ್ನಡಾಭಿಮಾನಿಗಳು ಎಂದಾದ ಮೇಲೆ ಈ ತಾರತಮ್ಯದ ಅಗತ್ಯವಿತ್ತೆ? ಇಲ್ಲಿ ಗಣ್ಯರು ಮತ್ತು ಮುಖ್ಯ ಅತಿಥಿಗಳಿಗೆ ಸ್ಟಾರ್ ಹೋಟೆಲಿನ ಮಾದರಿಯಲ್ಲಿ ಆಹಾರದ ಮೆನು ಸಿದ್ಧಪಡಿಸಲಾಗಿದೆ. ಇತರೆ ಪ್ರತಿನಿಽಗಳಿಗೆ ಬೇರೆ ಮಾದರಿಯ ಆಹಾರದ ಮೆನು ತಯಾರಿಸಲಾಗಿದೆ. ತಿನ್ನುವ ಆಹಾರದಲ್ಲಿ ಈ ರೀತಿಯ ಭೇದ-ಭಾವ ಮಾಡಿರುವುದು ಭಾಗವಹಿಸುತ್ತಿರುವ ಪ್ರತಿನಿಧಿಗಳಿಗೆ ಮಾಡಿರುವ ಅಪಮಾನವಲ್ಲವೇ? ಕನ್ನಡ ಸಾಹಿತ್ಯ ಸಮ್ಮೇಳನಗಳು ಎಂದರೆ ಭಾಗವಹಿಸುವ ಎಲ್ಲರನ್ನೂ ಮೊದಲು ಕನ್ನಡದ ಅಭಿಮಾನಿಗಳು ಎಂದು ಭಾವಿಸಬೇಕು.

ಆನಂತರ ಅವರನ್ನು ಅತಿಥಿಗಳು, ಮುಖ್ಯ ಅತಿಥಿಗಳು ಎಂದು ಪರಿಗಣಿಸಬೇಕು. ಆದರೆ ಇಲ್ಲಿ ಭಾಗವಹಿಸುವ ಪ್ರತಿನಿಽಗಳು ಮತ್ತು ಸಾರ್ವಜನಿಕರನ್ನು ಎರಡನೇ ದರ್ಜೆಯ ಮನುಷ್ಯರಂತೆ ಕಾಣುತ್ತಿದ್ದು, ಈ ತಾರತಮ್ಯ ಒಳ್ಳೆಯ ಬೆಳವಣಿಗೆಯಲ್ಲ. ಇದು ಸಾರ್ವಜನಿಕ ಕಾರ್ಯಕ್ರಮವಾಗಿರುವುದರಿಂದ ಎಲ್ಲರನ್ನೂ ಒಂದೇ ಎಂದು ಪರಿಗಣಿಸ ಬೇಕು. ಆದ್ದರಿಂದ ಕಸಾಪ ಈ ಬಗ್ಗೆ ಗಮನಹರಿಸಿ ಸಮ್ಮೇಳನದಲ್ಲಿ ಭಾಗವಹಿಸವ ಎಲ್ಲರಿಗೂ ಒಂದೇ ಮಾದರಿಯಲ್ಲಿ ಊಟದ ವ್ಯವಸ್ಥೆ ಮಾಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

andolana

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

4 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

4 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

4 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

4 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

14 hours ago