Andolana originals

ಓದುಗರ ಪತ್ರ: ಸಾಹಿತ್ಯ ಸಮ್ಮೇಳನದ ಊಟದಲ್ಲಿ ತಾರತಮ್ಯವೇಕೆ?

ಡಿಸೆಂಬರ್ ೨೧, ೨೨, ಮತ್ತು ೨೩ರಂದು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಗಣ್ಯರು, ಮುಖ್ಯ ಅತಿಥಿಗಳು ಮತ್ತು ಇತರೆ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಬೇರೆ-ಬೇರೆ ರೀತಿಯ ಊಟದ ವ್ಯವಸ್ಥೆ ಮಾಡಿರುವುದಾಗಿ ಸಮ್ಮೇಳನದ ಆಹಾರ ಸಮಿತಿಯವರು ಮಾಧ್ಯಮಗಳ ಮುಂದೆಯೇ ಹೇಳಿಕೆ ನೀಡಿದ್ದು, ಅದರ ಮೆನುವನ್ನೂ ಪತ್ರಿಕೆಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರೂ ಕನ್ನಡಾಭಿಮಾನಿಗಳು ಎಂದಾದ ಮೇಲೆ ಈ ತಾರತಮ್ಯದ ಅಗತ್ಯವಿತ್ತೆ? ಇಲ್ಲಿ ಗಣ್ಯರು ಮತ್ತು ಮುಖ್ಯ ಅತಿಥಿಗಳಿಗೆ ಸ್ಟಾರ್ ಹೋಟೆಲಿನ ಮಾದರಿಯಲ್ಲಿ ಆಹಾರದ ಮೆನು ಸಿದ್ಧಪಡಿಸಲಾಗಿದೆ. ಇತರೆ ಪ್ರತಿನಿಽಗಳಿಗೆ ಬೇರೆ ಮಾದರಿಯ ಆಹಾರದ ಮೆನು ತಯಾರಿಸಲಾಗಿದೆ. ತಿನ್ನುವ ಆಹಾರದಲ್ಲಿ ಈ ರೀತಿಯ ಭೇದ-ಭಾವ ಮಾಡಿರುವುದು ಭಾಗವಹಿಸುತ್ತಿರುವ ಪ್ರತಿನಿಧಿಗಳಿಗೆ ಮಾಡಿರುವ ಅಪಮಾನವಲ್ಲವೇ? ಕನ್ನಡ ಸಾಹಿತ್ಯ ಸಮ್ಮೇಳನಗಳು ಎಂದರೆ ಭಾಗವಹಿಸುವ ಎಲ್ಲರನ್ನೂ ಮೊದಲು ಕನ್ನಡದ ಅಭಿಮಾನಿಗಳು ಎಂದು ಭಾವಿಸಬೇಕು.

ಆನಂತರ ಅವರನ್ನು ಅತಿಥಿಗಳು, ಮುಖ್ಯ ಅತಿಥಿಗಳು ಎಂದು ಪರಿಗಣಿಸಬೇಕು. ಆದರೆ ಇಲ್ಲಿ ಭಾಗವಹಿಸುವ ಪ್ರತಿನಿಽಗಳು ಮತ್ತು ಸಾರ್ವಜನಿಕರನ್ನು ಎರಡನೇ ದರ್ಜೆಯ ಮನುಷ್ಯರಂತೆ ಕಾಣುತ್ತಿದ್ದು, ಈ ತಾರತಮ್ಯ ಒಳ್ಳೆಯ ಬೆಳವಣಿಗೆಯಲ್ಲ. ಇದು ಸಾರ್ವಜನಿಕ ಕಾರ್ಯಕ್ರಮವಾಗಿರುವುದರಿಂದ ಎಲ್ಲರನ್ನೂ ಒಂದೇ ಎಂದು ಪರಿಗಣಿಸ ಬೇಕು. ಆದ್ದರಿಂದ ಕಸಾಪ ಈ ಬಗ್ಗೆ ಗಮನಹರಿಸಿ ಸಮ್ಮೇಳನದಲ್ಲಿ ಭಾಗವಹಿಸವ ಎಲ್ಲರಿಗೂ ಒಂದೇ ಮಾದರಿಯಲ್ಲಿ ಊಟದ ವ್ಯವಸ್ಥೆ ಮಾಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

andolana

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago