Andolana originals

ಓದುಗರ ಪತ್ರ: ಸಾಹಿತ್ಯ ಸಮ್ಮೇಳನದ ಊಟದಲ್ಲಿ ತಾರತಮ್ಯವೇಕೆ?

ಡಿಸೆಂಬರ್ ೨೧, ೨೨, ಮತ್ತು ೨೩ರಂದು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಗಣ್ಯರು, ಮುಖ್ಯ ಅತಿಥಿಗಳು ಮತ್ತು ಇತರೆ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಬೇರೆ-ಬೇರೆ ರೀತಿಯ ಊಟದ ವ್ಯವಸ್ಥೆ ಮಾಡಿರುವುದಾಗಿ ಸಮ್ಮೇಳನದ ಆಹಾರ ಸಮಿತಿಯವರು ಮಾಧ್ಯಮಗಳ ಮುಂದೆಯೇ ಹೇಳಿಕೆ ನೀಡಿದ್ದು, ಅದರ ಮೆನುವನ್ನೂ ಪತ್ರಿಕೆಗಳಿಗೆ ಬಿಡುಗಡೆ ಮಾಡಿದ್ದಾರೆ.

ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರೂ ಕನ್ನಡಾಭಿಮಾನಿಗಳು ಎಂದಾದ ಮೇಲೆ ಈ ತಾರತಮ್ಯದ ಅಗತ್ಯವಿತ್ತೆ? ಇಲ್ಲಿ ಗಣ್ಯರು ಮತ್ತು ಮುಖ್ಯ ಅತಿಥಿಗಳಿಗೆ ಸ್ಟಾರ್ ಹೋಟೆಲಿನ ಮಾದರಿಯಲ್ಲಿ ಆಹಾರದ ಮೆನು ಸಿದ್ಧಪಡಿಸಲಾಗಿದೆ. ಇತರೆ ಪ್ರತಿನಿಽಗಳಿಗೆ ಬೇರೆ ಮಾದರಿಯ ಆಹಾರದ ಮೆನು ತಯಾರಿಸಲಾಗಿದೆ. ತಿನ್ನುವ ಆಹಾರದಲ್ಲಿ ಈ ರೀತಿಯ ಭೇದ-ಭಾವ ಮಾಡಿರುವುದು ಭಾಗವಹಿಸುತ್ತಿರುವ ಪ್ರತಿನಿಧಿಗಳಿಗೆ ಮಾಡಿರುವ ಅಪಮಾನವಲ್ಲವೇ? ಕನ್ನಡ ಸಾಹಿತ್ಯ ಸಮ್ಮೇಳನಗಳು ಎಂದರೆ ಭಾಗವಹಿಸುವ ಎಲ್ಲರನ್ನೂ ಮೊದಲು ಕನ್ನಡದ ಅಭಿಮಾನಿಗಳು ಎಂದು ಭಾವಿಸಬೇಕು.

ಆನಂತರ ಅವರನ್ನು ಅತಿಥಿಗಳು, ಮುಖ್ಯ ಅತಿಥಿಗಳು ಎಂದು ಪರಿಗಣಿಸಬೇಕು. ಆದರೆ ಇಲ್ಲಿ ಭಾಗವಹಿಸುವ ಪ್ರತಿನಿಽಗಳು ಮತ್ತು ಸಾರ್ವಜನಿಕರನ್ನು ಎರಡನೇ ದರ್ಜೆಯ ಮನುಷ್ಯರಂತೆ ಕಾಣುತ್ತಿದ್ದು, ಈ ತಾರತಮ್ಯ ಒಳ್ಳೆಯ ಬೆಳವಣಿಗೆಯಲ್ಲ. ಇದು ಸಾರ್ವಜನಿಕ ಕಾರ್ಯಕ್ರಮವಾಗಿರುವುದರಿಂದ ಎಲ್ಲರನ್ನೂ ಒಂದೇ ಎಂದು ಪರಿಗಣಿಸ ಬೇಕು. ಆದ್ದರಿಂದ ಕಸಾಪ ಈ ಬಗ್ಗೆ ಗಮನಹರಿಸಿ ಸಮ್ಮೇಳನದಲ್ಲಿ ಭಾಗವಹಿಸವ ಎಲ್ಲರಿಗೂ ಒಂದೇ ಮಾದರಿಯಲ್ಲಿ ಊಟದ ವ್ಯವಸ್ಥೆ ಮಾಡಬೇಕಿದೆ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago