ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ದೇಶವು ಹಲವಾರು ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿ ಮಂಚೂಣಿಗೆ ಬರುತ್ತಿದೆ. ಬಸ್ಸು, ಕಾರು, ಲಾರಿ, ಆಟೋ, ದ್ವಿಚಕ್ರ ವಾಹನಗಳು ಸೇರಿ ಮತ್ತಿತರ ವಾಹನಗಳಿಗೆ ಪೆಟ್ರೋಲ್,ಡೀಸೆಲ್ ಬಳಸಿ ಚಾಲನೆ ಮಾಡುತ್ತಿದ್ದ ಸಮಯದಲ್ಲಿ ಇತ್ತೀಚೆಗೆ ವಿದ್ಯುತ್ ಚಾಲಿತ ವಾಹನಗಳು ದೇಶದಲ್ಲಿ ಚಾಲ್ತಿಗೆ ಬಂದಿವೆ. ಅದರಲ್ಲೂ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿದ್ಯಾರ್ಥಿಗಳು, ಅಪ್ರಾಪ್ತರು, ಯುವಕ – ಯುವತಿಯರು, ಕೆಲ ಮಹಿಳೆಯರು, ಪುರುಷರು ಸಂಚಾರ ನಿಯಮ ಗಳನ್ನು ಪಾಲಿಸದೆ, ಹೆಲ್ಮೆಟ್ ಧರಿಸದೆ ಅಡ್ಡಾದಿಡ್ಡಿ ಚಾಲನೆ ಮಾಡುತ್ತಿ ರುವುದು ಕಂಡುಬರುತ್ತಿದೆ. ಇದರಿಂದ ಇತರ ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಆದ್ದರಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವವರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಬೇಕು.
ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಅಪ್ರಾಪ್ತರೂ ಚಾಲನೆ ಮಾಡುತ್ತಿರುವುದರಿಂದ ಸಣ್ಣ ವಯಸ್ಸಿನವರ ಅಪಘಾತ, ಸಾವು ನೋವುಗಳನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ , ಮೈಸೂರು
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…