ಓದುಗರ ಪತ್ರ
ಮಾನವ ಜನ್ಮ ಪ್ರಕೃತಿಯು ಕೊಟ್ಟ ಅಮೂಲ್ಯವಾದ ಕೊಡುಗೆ. ಸಮಸ್ಯೆಗಳಿವೆ ಎಂದು ಜೀವನವನ್ನು ಅಂತ್ಯಗೊಳಿಸಲು ಯೋಚನೆ ಮಾಡುವುದು ತಪ್ಪು. ತಾವು ಬಯಸಿದ ವಸ್ತು ಕ್ಷಣಮಾತ್ರದಲ್ಲಿ ಸಿಗಬೇಕು ಎಂದು ಬಯಸುವ ಮನುಷ್ಯ ತಾನು ಅಂದು ಕೊಂಡಿದ್ದನ್ನು ಸಾಧಿಸಲಾಗದಿದ್ದರೆ ಆತ್ಮತ್ಯೆ ಹಾದಿ ಹಿಡಿಯುತ್ತಾನೆ. ಆತ್ಮಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸ್ನೇಹಿತರು, ಶಾಲಾ ಕಾಲೇಜುಗಳ ಪಾತ್ರ ಹಿರಿದಾಗಿರುತ್ತದೆ. ಈಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.
ಉದ್ಯೋಗ ಸಿಗದಿದ್ದಾಗ, ವಿದ್ಯಾಭ್ಯಾಸದಲ್ಲಿ, ಪ್ರೇಮದಲ್ಲಿ ವಿಫಲವಾದಾಗ, ಅನಾರೋಗ್ಯ, ದುಶ್ಚಟಕ್ಕೆ ಬಲಿಯಾದಾಗ ಹೀಗೆ ಹಲವಾರು ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರವನ್ನು ಮಾಡುತ್ತಾರೆ. ಶಾಲಾ-ಕಾಲೇಜುಗಳಲ್ಲಿ ಮನೋವೈದ್ಯರು ಮಕ್ಕಳಿಗೆ ಧೈರ್ಯ ತುಂಬಬೇಕು. ಶಿಕ್ಷಕರು ಇದರ ವಿಷಯವಾಗಿ ತಿಳಿ ಹೇಳಬೇಕು. ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಆತ್ಮಹತ್ಯೆಯ ಸುದ್ದಿಗಳನ್ನು ವೈಭವೀಕರಿಸಬಾರದು. ಬದುಕನ್ನು ಬಂದಂತೆ ಸ್ವೀಕರಿಸಬೇಕು. ಈ ಕುರಿತು ಸರ್ಕಾರಗಳು ಜಾಗೃತಿ ಮೂಡಿಸಲಿ.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ. ಕಾಲೋನಿ, ಮೈಸೂರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…