ಓದುಗರ ಪತ್ರ
ಇತ್ತೀಚೆಗೆ ಅನೇಕ ಶಾಲೆಗಳು ಶಿಕ್ಷಣದ ನಿಜವಾದ ಅರ್ಥವನ್ನು ಸಂಪೂರ್ಣ ಮರೆತಿವೆ. ಎಸ್ಯುಪಿಡಬ್ಲ್ಯು (ಸಾಮಾಜಿಕವಾಗಿ ಉಪಯುಕ್ತ ಉತ್ಪಾದಕ ಕೆಲಸ) ಮತ್ತು ಕ್ರೀಡಾ ಚಟುವಟಿಕೆಗಳು ಪಠ್ಯಕ್ರಮದ ಅವಿಭಾಜ್ಯ ಭಾಗವಾಗಿದ್ದರೂ, ಬಹುತೇಕ ಶಾಲೆಗಳು ಇವುಗಳನ್ನು ಕೇವಲ ‘ಔಪಚಾರಿಕ’ದಂತೆ ನೋಡುತ್ತಿವೆ ಎಂಬ ವರದಿ ನೋವುಂಟು ಮಾಡುತ್ತದೆ. ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನ ತುಂಬಿ ಪರೀಕ್ಷಾ ಅಂಕಗಳ ಹಿಂದೆ ಓಡಿಸುವುದು ಸರಿಯಲ್ಲ. ಎಸ್ಯುಪಿ ಡಬ್ಲ್ಯು ಮೂಲಕ ಮಕ್ಕಳಲ್ಲಿ ಶ್ರಮದ ಘನತೆ, ಕೌಶಲ ಮತ್ತು ಸ್ವಾವಲಂಬನೆ ಬೆಳೆಸಬೇಕು.
ಮಕ್ಕಳಿಗೆ ದಿನವೂ ಕನಿಷ್ಠ ಅರ್ಧಗಂಟೆ ಆಟದ ಸಮಯ ನೀಡಲು ಶಾಲೆಗಳು ಮುಂದಾಗುತ್ತಿಲ್ಲ. ಪಾಠದ ಒತ್ತಡದಲ್ಲಿ ಮಕ್ಕಳು ಉಸಿರಾಡಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಶಿಕ್ಷಣದಿಂದ ಅವರ ಆರೋಗ್ಯವೂಹಾಳಾಗುತ್ತದೆ. ಶಿಕ್ಷಣ ಇಲಾಖೆ ಇಂತಹ ಶಾಲೆಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಎಸ್ಯು ಪಿ ಡಬ್ಲ್ಯು ಮತ್ತು ಕ್ರೀಡಾ ಚಟುವಟಿಕೆಗಳನ್ನು ಕಡ್ಡಾಯಗೊಳಿಸುವ ಕಾನೂನು ತರಬೇಕು. ಇಲ್ಲವಾದರೆ ಮುಂದಿನ ಪೀಳಿಗೆಯ ದೈಹಿಕ ಹಾಗೂ ಕ್ಷೀಣಿಸುತ್ತದೆ.
ನಿಜವಾದ ಶಿಕ್ಷಣ ಎಂದರೆ ಜೀವನಕ್ಕೆ ತಯಾರು ಮಾಡುವುದು. ಪರೀಕ್ಷೆಗಲ್ಲ. ಇದನ್ನು ಮರೆಯುತ್ತಿರುವ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆ ಕಠಿಣಕ್ರಮ ಕೈಗೊಳ್ಳುವುದು ಅಗತ್ಯ.
-ಡಾ. ಎಚ್. ಕೆ.ವಿಜಯಕುಮಾರ್, ಬೆಂಗಳೂರು
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…