ಓದುಗರ ಪತ್ರ
ಇತ್ತೀಚೆಗೆ ಅನೇಕ ಶಾಲೆಗಳು ಶಿಕ್ಷಣದ ನಿಜವಾದ ಅರ್ಥವನ್ನು ಸಂಪೂರ್ಣ ಮರೆತಿವೆ. ಎಸ್ಯುಪಿಡಬ್ಲ್ಯು (ಸಾಮಾಜಿಕವಾಗಿ ಉಪಯುಕ್ತ ಉತ್ಪಾದಕ ಕೆಲಸ) ಮತ್ತು ಕ್ರೀಡಾ ಚಟುವಟಿಕೆಗಳು ಪಠ್ಯಕ್ರಮದ ಅವಿಭಾಜ್ಯ ಭಾಗವಾಗಿದ್ದರೂ, ಬಹುತೇಕ ಶಾಲೆಗಳು ಇವುಗಳನ್ನು ಕೇವಲ ‘ಔಪಚಾರಿಕ’ದಂತೆ ನೋಡುತ್ತಿವೆ ಎಂಬ ವರದಿ ನೋವುಂಟು ಮಾಡುತ್ತದೆ. ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನ ತುಂಬಿ ಪರೀಕ್ಷಾ ಅಂಕಗಳ ಹಿಂದೆ ಓಡಿಸುವುದು ಸರಿಯಲ್ಲ. ಎಸ್ಯುಪಿ ಡಬ್ಲ್ಯು ಮೂಲಕ ಮಕ್ಕಳಲ್ಲಿ ಶ್ರಮದ ಘನತೆ, ಕೌಶಲ ಮತ್ತು ಸ್ವಾವಲಂಬನೆ ಬೆಳೆಸಬೇಕು.
ಮಕ್ಕಳಿಗೆ ದಿನವೂ ಕನಿಷ್ಠ ಅರ್ಧಗಂಟೆ ಆಟದ ಸಮಯ ನೀಡಲು ಶಾಲೆಗಳು ಮುಂದಾಗುತ್ತಿಲ್ಲ. ಪಾಠದ ಒತ್ತಡದಲ್ಲಿ ಮಕ್ಕಳು ಉಸಿರಾಡಲಾಗದ ಸ್ಥಿತಿಗೆ ತಲುಪಿದ್ದಾರೆ. ಇಂತಹ ಶಿಕ್ಷಣದಿಂದ ಅವರ ಆರೋಗ್ಯವೂಹಾಳಾಗುತ್ತದೆ. ಶಿಕ್ಷಣ ಇಲಾಖೆ ಇಂತಹ ಶಾಲೆಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಎಸ್ಯು ಪಿ ಡಬ್ಲ್ಯು ಮತ್ತು ಕ್ರೀಡಾ ಚಟುವಟಿಕೆಗಳನ್ನು ಕಡ್ಡಾಯಗೊಳಿಸುವ ಕಾನೂನು ತರಬೇಕು. ಇಲ್ಲವಾದರೆ ಮುಂದಿನ ಪೀಳಿಗೆಯ ದೈಹಿಕ ಹಾಗೂ ಕ್ಷೀಣಿಸುತ್ತದೆ.
ನಿಜವಾದ ಶಿಕ್ಷಣ ಎಂದರೆ ಜೀವನಕ್ಕೆ ತಯಾರು ಮಾಡುವುದು. ಪರೀಕ್ಷೆಗಲ್ಲ. ಇದನ್ನು ಮರೆಯುತ್ತಿರುವ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆ ಕಠಿಣಕ್ರಮ ಕೈಗೊಳ್ಳುವುದು ಅಗತ್ಯ.
-ಡಾ. ಎಚ್. ಕೆ.ವಿಜಯಕುಮಾರ್, ಬೆಂಗಳೂರು
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…