ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ಸಿಗುತ್ತಿತ್ತು. ಈಗ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ಗಳ ಓಡಾಟವನ್ನೂ ನಿಲ್ಲಿಸಲಾಗಿದೆ.
ಹೀಗಾಗಿ ಈ ಬಸ್ ತಂಗುದಾಣದಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ . ಇದರಿಂದ ಸದರಿ ಬಸ್ ನಿಲ್ದಾಣ ಪ್ರಸ್ತುತ ಭಿಕ್ಷೆ ಬೇಡುವವರು ಮತ್ತು ಹಸು, ಕುರಿ, ಕೋಳಿಗಳ ತಂಗುದಾಣವಾಗಿ ಮಾರ್ಪಟ್ಟಿದೆ. ಈ ಸಂಬಂಧ ಕೆಎಸ್ಆರ್ಟಿಸಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಸಿಗುತ್ತಿಲ್ಲ.
ಸಂಬಂಧಪಟ್ಟವರು ಈ ಮಾರ್ಗದಲ್ಲಿ ಬಸ್ಗಳ ಸಂಚಾರವನ್ನು ಪುನಾರಂಭಿಸಿ ಜನರು ಅನಾಥವಾಗಿರುವ ಈ ಬಸ್ ನಿಲ್ದಾಣದ ಪ್ರಯೋಜನ ಪಡೆಯುವಂತೆ ಮಾಡಲು ಕ್ರಮವಹಿಸಬೇಕಿದೆ.
– ಸಿ.ಶಿವಣ್ಣ , ಪ್ರಧಾನ ಕಾರ್ಯದರ್ಶಿ, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ





