ಓದುಗರ ಪತ್ರ
ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ಸಿಗುತ್ತಿತ್ತು. ಈಗ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ಗಳ ಓಡಾಟವನ್ನೂ ನಿಲ್ಲಿಸಲಾಗಿದೆ.
ಹೀಗಾಗಿ ಈ ಬಸ್ ತಂಗುದಾಣದಿಂದ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ . ಇದರಿಂದ ಸದರಿ ಬಸ್ ನಿಲ್ದಾಣ ಪ್ರಸ್ತುತ ಭಿಕ್ಷೆ ಬೇಡುವವರು ಮತ್ತು ಹಸು, ಕುರಿ, ಕೋಳಿಗಳ ತಂಗುದಾಣವಾಗಿ ಮಾರ್ಪಟ್ಟಿದೆ. ಈ ಸಂಬಂಧ ಕೆಎಸ್ಆರ್ಟಿಸಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಸಿಗುತ್ತಿಲ್ಲ.
ಸಂಬಂಧಪಟ್ಟವರು ಈ ಮಾರ್ಗದಲ್ಲಿ ಬಸ್ಗಳ ಸಂಚಾರವನ್ನು ಪುನಾರಂಭಿಸಿ ಜನರು ಅನಾಥವಾಗಿರುವ ಈ ಬಸ್ ನಿಲ್ದಾಣದ ಪ್ರಯೋಜನ ಪಡೆಯುವಂತೆ ಮಾಡಲು ಕ್ರಮವಹಿಸಬೇಕಿದೆ.
– ಸಿ.ಶಿವಣ್ಣ , ಪ್ರಧಾನ ಕಾರ್ಯದರ್ಶಿ, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…