ಓದುಗರ ಪತ್ರ
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ ಬೇಸಿಗೆಯ ರಜೆ ಮಕ್ಕಳಿಗೆ ಸಂಪೂರ್ಣ ಉಪಯುಕ್ತವಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ.
ದೀರ್ಘ ಕಾಲ ಶಾಲೆಯಿಂದ ದೂರವಿರುವುದರಿಂದ ಮಕ್ಕಳು ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಅವರು ಕಲಿತ ವಿಷಯಗಳನ್ನು ಮರೆತುಬಿಡುತ್ತಾರೆ. ಇದರಿಂದ ಶಾಲೆ ಮತ್ತೆ ಆರಂಭವಾದಾಗ ಅವರಿಗೆ ಪಾಠಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಆದ್ದರಿಂದ ರಜೆ ಸಮಯದಲ್ಲಿ ದಿನಕ್ಕೆ ಸ್ವಲ್ಪ ಸಮಯವಾದರೂ ಓದಿಗೆ ಮೀಸಲಿಡಬೇಕು.
ಇನ್ನೊಂದು ಪ್ರಮುಖ ವಿಷಯ ಎಂದರೆ, ಇಂದಿನ ಮಕ್ಕಳು ರಜೆಯ ಸಮಯವನ್ನು ಮೊಬೈಲ್ -ನ್, ಟಿವಿ ಮತ್ತು ವಿಡಿಯೋ ಗೇಮ್ಗಳಲ್ಲಿ ಕಾಲ ಕಳೆಯುತ್ತಾರೆ. ಇದರಿಂದ ಅವರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕಣ್ಣಿನ ಸಮಸ್ಯೆಗಳು, ದೇಹದ ದೌರ್ಬಲ್ಯ ಮತ್ತು ಮನಸ್ಸಿನ ಅಶಾಂತಿ ಉಂಟಾಗಬಹುದು. ಆದ್ದರಿಂದ ಪೋಷಕರು ಮಕ್ಕಳನ್ನು ಹೊರಗೆ ಆಟ ಆಡಲು, ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು.
ಮೂರನೆಯದಾಗಿ, ಬೇಸಿಗೆಯ ರಜೆ ಮಕ್ಕಳಿಗೆ ಹೊಸ ವಿಷಯಗಳನ್ನು ಕಲಿಯಲು ಉತ್ತಮ ಅವಕಾಶವಾಗಿದೆ. ಚಿತ್ರಕಲೆ, ಸಂಗೀತ, ನೃತ್ಯ, ಯೋಗ, ತೋಟಗಾರಿಕೆ ಇತ್ಯಾದಿ ಕೌಶಲಗಳನ್ನು ಈ ಸಮಯದಲ್ಲಿ ಬೆಳೆಸಬಹುದು. ಇದು ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಾಯವಾಗುತ್ತದೆ. ಕೊನೆಯದಾಗಿ, ಬೇಸಿಗೆಯ ರಜೆ ಸಂಪೂರ್ಣವಾಗಿ ವ್ಯರ್ಥವಾಗದಂತೆ ನೋಡಿಕೊಳ್ಳುವುದು ಪೋಷಕರ ಹಾಗೂ ಮಕ್ಕಳ ಜವಾಬ್ದಾರಿ. ರಜೆ ಸಮಯವನ್ನು ಸರಿಯಾಗಿ ಉಪಯೋಗಿಸಿಕೊಂಡರೆ ಅದು ಮಕ್ಕಳ ಭವಿಷ್ಯಕ್ಕೆ ಬಲವಾದ ಅಡಿಗಗುತ್ತದೆ.ಆದ್ದರಿಂದ ರಜೆ ಪ್ರಯೋಜನಕಾರಿಯಾಗಿ ಇರಬೇಕಾಗಿದೆ.
-ಎಂ .ಕಿರಣ್ ಕುಮಾರ್, ಬನ್ನಿಮಂಟಪ, ಮೈಸೂರು
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…
ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…
ಬೆಂಗಳೂರು: ಮಾರ್ಚ್.28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್…
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…
ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಒಂದು ದಿನ ಮೊಟಕುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.27ರವರೆಗೆ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಮಾರ್ಚ್.26ರಂದು ಕೊನೆಗೊಳ್ಳಲಿದೆ.…
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…