ಓದುಗರ ಪತ್ರ
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ ಬೇಸಿಗೆಯ ರಜೆ ಮಕ್ಕಳಿಗೆ ಸಂಪೂರ್ಣ ಉಪಯುಕ್ತವಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ.
ದೀರ್ಘ ಕಾಲ ಶಾಲೆಯಿಂದ ದೂರವಿರುವುದರಿಂದ ಮಕ್ಕಳು ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಅವರು ಕಲಿತ ವಿಷಯಗಳನ್ನು ಮರೆತುಬಿಡುತ್ತಾರೆ. ಇದರಿಂದ ಶಾಲೆ ಮತ್ತೆ ಆರಂಭವಾದಾಗ ಅವರಿಗೆ ಪಾಠಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಆದ್ದರಿಂದ ರಜೆ ಸಮಯದಲ್ಲಿ ದಿನಕ್ಕೆ ಸ್ವಲ್ಪ ಸಮಯವಾದರೂ ಓದಿಗೆ ಮೀಸಲಿಡಬೇಕು.
ಇನ್ನೊಂದು ಪ್ರಮುಖ ವಿಷಯ ಎಂದರೆ, ಇಂದಿನ ಮಕ್ಕಳು ರಜೆಯ ಸಮಯವನ್ನು ಮೊಬೈಲ್ -ನ್, ಟಿವಿ ಮತ್ತು ವಿಡಿಯೋ ಗೇಮ್ಗಳಲ್ಲಿ ಕಾಲ ಕಳೆಯುತ್ತಾರೆ. ಇದರಿಂದ ಅವರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕಣ್ಣಿನ ಸಮಸ್ಯೆಗಳು, ದೇಹದ ದೌರ್ಬಲ್ಯ ಮತ್ತು ಮನಸ್ಸಿನ ಅಶಾಂತಿ ಉಂಟಾಗಬಹುದು. ಆದ್ದರಿಂದ ಪೋಷಕರು ಮಕ್ಕಳನ್ನು ಹೊರಗೆ ಆಟ ಆಡಲು, ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು.
ಮೂರನೆಯದಾಗಿ, ಬೇಸಿಗೆಯ ರಜೆ ಮಕ್ಕಳಿಗೆ ಹೊಸ ವಿಷಯಗಳನ್ನು ಕಲಿಯಲು ಉತ್ತಮ ಅವಕಾಶವಾಗಿದೆ. ಚಿತ್ರಕಲೆ, ಸಂಗೀತ, ನೃತ್ಯ, ಯೋಗ, ತೋಟಗಾರಿಕೆ ಇತ್ಯಾದಿ ಕೌಶಲಗಳನ್ನು ಈ ಸಮಯದಲ್ಲಿ ಬೆಳೆಸಬಹುದು. ಇದು ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಾಯವಾಗುತ್ತದೆ. ಕೊನೆಯದಾಗಿ, ಬೇಸಿಗೆಯ ರಜೆ ಸಂಪೂರ್ಣವಾಗಿ ವ್ಯರ್ಥವಾಗದಂತೆ ನೋಡಿಕೊಳ್ಳುವುದು ಪೋಷಕರ ಹಾಗೂ ಮಕ್ಕಳ ಜವಾಬ್ದಾರಿ. ರಜೆ ಸಮಯವನ್ನು ಸರಿಯಾಗಿ ಉಪಯೋಗಿಸಿಕೊಂಡರೆ ಅದು ಮಕ್ಕಳ ಭವಿಷ್ಯಕ್ಕೆ ಬಲವಾದ ಅಡಿಗಗುತ್ತದೆ.ಆದ್ದರಿಂದ ರಜೆ ಪ್ರಯೋಜನಕಾರಿಯಾಗಿ ಇರಬೇಕಾಗಿದೆ.
-ಎಂ .ಕಿರಣ್ ಕುಮಾರ್, ಬನ್ನಿಮಂಟಪ, ಮೈಸೂರು
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…