ಓದುಗರ ಪತ್ರ
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ ಬೇಸಿಗೆಯ ರಜೆ ಮಕ್ಕಳಿಗೆ ಸಂಪೂರ್ಣ ಉಪಯುಕ್ತವಾಗುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ.
ದೀರ್ಘ ಕಾಲ ಶಾಲೆಯಿಂದ ದೂರವಿರುವುದರಿಂದ ಮಕ್ಕಳು ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಅವರು ಕಲಿತ ವಿಷಯಗಳನ್ನು ಮರೆತುಬಿಡುತ್ತಾರೆ. ಇದರಿಂದ ಶಾಲೆ ಮತ್ತೆ ಆರಂಭವಾದಾಗ ಅವರಿಗೆ ಪಾಠಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಆದ್ದರಿಂದ ರಜೆ ಸಮಯದಲ್ಲಿ ದಿನಕ್ಕೆ ಸ್ವಲ್ಪ ಸಮಯವಾದರೂ ಓದಿಗೆ ಮೀಸಲಿಡಬೇಕು.
ಇನ್ನೊಂದು ಪ್ರಮುಖ ವಿಷಯ ಎಂದರೆ, ಇಂದಿನ ಮಕ್ಕಳು ರಜೆಯ ಸಮಯವನ್ನು ಮೊಬೈಲ್ -ನ್, ಟಿವಿ ಮತ್ತು ವಿಡಿಯೋ ಗೇಮ್ಗಳಲ್ಲಿ ಕಾಲ ಕಳೆಯುತ್ತಾರೆ. ಇದರಿಂದ ಅವರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕಣ್ಣಿನ ಸಮಸ್ಯೆಗಳು, ದೇಹದ ದೌರ್ಬಲ್ಯ ಮತ್ತು ಮನಸ್ಸಿನ ಅಶಾಂತಿ ಉಂಟಾಗಬಹುದು. ಆದ್ದರಿಂದ ಪೋಷಕರು ಮಕ್ಕಳನ್ನು ಹೊರಗೆ ಆಟ ಆಡಲು, ಕ್ರೀಡೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು.
ಮೂರನೆಯದಾಗಿ, ಬೇಸಿಗೆಯ ರಜೆ ಮಕ್ಕಳಿಗೆ ಹೊಸ ವಿಷಯಗಳನ್ನು ಕಲಿಯಲು ಉತ್ತಮ ಅವಕಾಶವಾಗಿದೆ. ಚಿತ್ರಕಲೆ, ಸಂಗೀತ, ನೃತ್ಯ, ಯೋಗ, ತೋಟಗಾರಿಕೆ ಇತ್ಯಾದಿ ಕೌಶಲಗಳನ್ನು ಈ ಸಮಯದಲ್ಲಿ ಬೆಳೆಸಬಹುದು. ಇದು ಅವರ ವ್ಯಕ್ತಿತ್ವ ವಿಕಸನಕ್ಕೆ ಸಹಾಯವಾಗುತ್ತದೆ. ಕೊನೆಯದಾಗಿ, ಬೇಸಿಗೆಯ ರಜೆ ಸಂಪೂರ್ಣವಾಗಿ ವ್ಯರ್ಥವಾಗದಂತೆ ನೋಡಿಕೊಳ್ಳುವುದು ಪೋಷಕರ ಹಾಗೂ ಮಕ್ಕಳ ಜವಾಬ್ದಾರಿ. ರಜೆ ಸಮಯವನ್ನು ಸರಿಯಾಗಿ ಉಪಯೋಗಿಸಿಕೊಂಡರೆ ಅದು ಮಕ್ಕಳ ಭವಿಷ್ಯಕ್ಕೆ ಬಲವಾದ ಅಡಿಗಗುತ್ತದೆ.ಆದ್ದರಿಂದ ರಜೆ ಪ್ರಯೋಜನಕಾರಿಯಾಗಿ ಇರಬೇಕಾಗಿದೆ.
-ಎಂ .ಕಿರಣ್ ಕುಮಾರ್, ಬನ್ನಿಮಂಟಪ, ಮೈಸೂರು
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…