ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು ಕೇರಳ ವಿಧಾನ ಸಭೆ ಅಂಗೀಕಾರ ಮಾಡಿರುವುದನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಹೇಳಿರುವುದು ಸ್ವಾಗತಾರ್ಹ. ಕೇರಳದ ಗಡಿಜಿಲ್ಲೆಯಾದ ಕಾಸರಗೋಡಿನಲ್ಲಿ ಶೇ.೭೦ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮತ್ತು ಕನ್ನಡ ಮಾಧ್ಯಮದಲ್ಲೇ ಕಲಿಯಲು ಬಯಸುತ್ತಾರೆ. ಮಲಯಾಳಂ ಕಲಿಕೆ ಕಡ್ಡಾಯಗೊಳಿಸಿದರೆ ಕೇರಳ ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರು ಮಾತೃ ಭಾಷೆ ಕಲಿಕೆ ಅವಕಾಶದಿಂದ ವಂಚಿತರಾಗುವುದರ ಜೊತೆಗೆ, ಕನ್ನಡಿಗರ ಮೂಲಭೂತ ಹಕ್ಕನ್ನು ದಮನ ಮಾಡುವಂತಹ ಇಂತಹ ಕೆಲಸಕ್ಕೆ ಕೇರಳ ಸರ್ಕಾರ ಮುಂದಾಗಿರುವುದು ವಿಷಾದಕರ ಸಂಗತಿ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಕಾಸರಗೋಡಿನ ಕನ್ನಡಿಗರ ಜೊತೆ ನಿಲ್ಲುವುದು ಸೂಕ್ತ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…