Andolana originals

ಓದುಗರ ಪತ್ರ: ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ವಿಷಾದಕರ

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಕಲಿಯಬೇಕು ಎಂಬ ಹಿನ್ನೆಲೆಯಲ್ಲಿ, ಮಲಯಾಳಂ ಭಾಷಾ ಮಸೂದೆ ೨೦೨೫ ಅನ್ನು ಕೇರಳ ವಿಧಾನ ಸಭೆ ಅಂಗೀಕಾರ ಮಾಡಿರುವುದನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು, ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಹೇಳಿರುವುದು ಸ್ವಾಗತಾರ್ಹ. ಕೇರಳದ ಗಡಿಜಿಲ್ಲೆಯಾದ ಕಾಸರಗೋಡಿನಲ್ಲಿ ಶೇ.೭೦ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮತ್ತು ಕನ್ನಡ ಮಾಧ್ಯಮದಲ್ಲೇ ಕಲಿಯಲು ಬಯಸುತ್ತಾರೆ. ಮಲಯಾಳಂ ಕಲಿಕೆ ಕಡ್ಡಾಯಗೊಳಿಸಿದರೆ ಕೇರಳ ರಾಜ್ಯದಲ್ಲಿ ಭಾಷಾ ಅಲ್ಪಸಂಖ್ಯಾತರಾದ ಕನ್ನಡಿಗರು ಮಾತೃ ಭಾಷೆ ಕಲಿಕೆ ಅವಕಾಶದಿಂದ ವಂಚಿತರಾಗುವುದರ ಜೊತೆಗೆ, ಕನ್ನಡಿಗರ ಮೂಲಭೂತ ಹಕ್ಕನ್ನು ದಮನ ಮಾಡುವಂತಹ ಇಂತಹ ಕೆಲಸಕ್ಕೆ ಕೇರಳ ಸರ್ಕಾರ ಮುಂದಾಗಿರುವುದು ವಿಷಾದಕರ ಸಂಗತಿ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಕಾಸರಗೋಡಿನ ಕನ್ನಡಿಗರ ಜೊತೆ ನಿಲ್ಲುವುದು ಸೂಕ್ತ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago