ಮಂಡ್ಯದ ಪಾಂಡವಪುರ ತಾಲ್ಲೂಕಿನ ಡಿಂಕ ಗ್ರಾಮದ ಮಹಿಳೆ ಮಂಗಳಮ್ಮ ೨೦೨೫ರ ದಕ್ಷಿಣ ಡೇರಿ ಶೃಂಗ ಸಭೆಯಲ್ಲಿ ಅತ್ಯುತ್ತಮ ಹೈನುಗಾರ್ತಿ ಪ್ರಶಸ್ತಿ ಪಡೆದಿರುವುದು ರಾಜ್ಯವೇ ಹೆಮ್ಮೆ ಪಡುವ ವಿಚಾರ.
ಮಂಗಳಮ್ಮ ಓದಿದ್ದು ಕೇವಲ ೫ನೇ ತರಗತಿ ಯಾದರೂ ಹೈನುಗಾರಿಕೆಯಲ್ಲಿ ಸಂಪೂರ್ಣ ಜ್ಞಾನವನ್ನು ಹೊಂದಿದ್ದಾರೆ. ೨೦ ವರ್ಷಗಳ ಹಿಂದೆ ಕೇವಲ ಒಂದು ಹಸುವಿನಿಂದ ಹೈನುಗಾರಿಕೆ ಪ್ರಾರಂಭಿಸಿದ ಇವರು ಇಂದು ೩೦ ಹೈಬ್ರಿಡ್ ತಳಿಯ ಹಸುಗಳನ್ನು ಸಾಕಿ ಹಾಲು ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ಒಂದು ಲಕ್ಷ ಲೀಟರ್ಗೂ ಅಧಿಕ ಹಾಲನ್ನು ಉತ್ಪಾದಿಸಿ ಡಿಂಕ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸರಬರಾಜು ಮಾಡುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಆ ಮೂಲಕ ಒಂದು ವರ್ಷದಲ್ಲಿ ೩೦ ಲಕ್ಷ ರೂಪಾಯಿ ಆದಾಯವನ್ನೂ ಗಳಿಸಿದ್ದಾರೆ.
ಮಂಗಳಮ್ಮನವರ ಸತತ ಪ್ರಯತ್ನ, ಕೆಲಸದ ಮೇಲಿನ ಶ್ರದ್ಧೆ ಫಲ ನೀಡಿದೆ. ಮಹಿಳೆಯರು ಸ್ವಾವಲಂಬಿಯಾಗಿ ಶ್ರಮಪಟ್ಟು ದುಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಂಗಳಮ್ಮರವರೇ ಮಾದರಿ. ಹೈನುಗಾರಿಕೆ ಮಾಡುವವರು ಮಂಗಳಮ್ಮನವರನ್ನು ಮಾದರಿಯಾಗಿ ಅನುಸರಿಸಿ ಅವರಂತೆ ಶ್ರಮಿಸಬೇಕು. ಸರ್ಕಾರ ಇವರ ಸಾಧನೆಯನ್ನು ಗುರುತಿಸಿ ಕರ್ನಾಟಕದ ಪ್ರತಿಷ್ಠಿತ ನಂದಿನಿ ಹಾಲಿನ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಬೆಂಗಳೂರು: ಸುಮಾರು 1ಕೋಟಿ ರೂ. ವರೆಗಿನ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.…
ಬೆಂಗಳೂರು: ಬೇಲೂರು ತಾಲೂಕಿನ ಕೋಗೋಡು ಗ್ರಾಮದಲ್ಲಿ 45 ವರ್ಷದ ಮಹಿಳೆಯೊಬ್ಬರು ಕಾಡಾನೆ ದಾಳಿಯಿಂದ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ, ಈ…
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…