Andolana originals

ಓದುಗರ ಪತ್ರ: ಮಾದರಿ ಮಹಿಳೆ ಮಂಗಳಮ್ಮ

ಮಂಡ್ಯದ ಪಾಂಡವಪುರ ತಾಲ್ಲೂಕಿನ ಡಿಂಕ ಗ್ರಾಮದ ಮಹಿಳೆ ಮಂಗಳಮ್ಮ ೨೦೨೫ರ ದಕ್ಷಿಣ ಡೇರಿ ಶೃಂಗ ಸಭೆಯಲ್ಲಿ ಅತ್ಯುತ್ತಮ ಹೈನುಗಾರ್ತಿ ಪ್ರಶಸ್ತಿ ಪಡೆದಿರುವುದು ರಾಜ್ಯವೇ ಹೆಮ್ಮೆ ಪಡುವ ವಿಚಾರ.

ಮಂಗಳಮ್ಮ ಓದಿದ್ದು ಕೇವಲ ೫ನೇ ತರಗತಿ ಯಾದರೂ ಹೈನುಗಾರಿಕೆಯಲ್ಲಿ ಸಂಪೂರ್ಣ ಜ್ಞಾನವನ್ನು ಹೊಂದಿದ್ದಾರೆ. ೨೦ ವರ್ಷಗಳ ಹಿಂದೆ ಕೇವಲ ಒಂದು ಹಸುವಿನಿಂದ ಹೈನುಗಾರಿಕೆ ಪ್ರಾರಂಭಿಸಿದ ಇವರು ಇಂದು ೩೦ ಹೈಬ್ರಿಡ್ ತಳಿಯ ಹಸುಗಳನ್ನು ಸಾಕಿ ಹಾಲು ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ಒಂದು ಲಕ್ಷ ಲೀಟರ್‌ಗೂ ಅಧಿಕ ಹಾಲನ್ನು ಉತ್ಪಾದಿಸಿ ಡಿಂಕ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸರಬರಾಜು ಮಾಡುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಆ ಮೂಲಕ ಒಂದು ವರ್ಷದಲ್ಲಿ ೩೦ ಲಕ್ಷ ರೂಪಾಯಿ ಆದಾಯವನ್ನೂ ಗಳಿಸಿದ್ದಾರೆ.

ಮಂಗಳಮ್ಮನವರ ಸತತ ಪ್ರಯತ್ನ, ಕೆಲಸದ ಮೇಲಿನ ಶ್ರದ್ಧೆ ಫಲ ನೀಡಿದೆ. ಮಹಿಳೆಯರು ಸ್ವಾವಲಂಬಿಯಾಗಿ ಶ್ರಮಪಟ್ಟು ದುಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಂಗಳಮ್ಮರವರೇ ಮಾದರಿ. ಹೈನುಗಾರಿಕೆ ಮಾಡುವವರು ಮಂಗಳಮ್ಮನವರನ್ನು ಮಾದರಿಯಾಗಿ ಅನುಸರಿಸಿ ಅವರಂತೆ ಶ್ರಮಿಸಬೇಕು. ಸರ್ಕಾರ ಇವರ ಸಾಧನೆಯನ್ನು ಗುರುತಿಸಿ ಕರ್ನಾಟಕದ ಪ್ರತಿಷ್ಠಿತ ನಂದಿನಿ ಹಾಲಿನ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

9 mins ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

5 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

5 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

9 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

9 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

9 hours ago