Andolana originals

ಓದುಗರ ಪತ್ರ: ಮಾದರಿ ಮಹಿಳೆ ಮಂಗಳಮ್ಮ

ಮಂಡ್ಯದ ಪಾಂಡವಪುರ ತಾಲ್ಲೂಕಿನ ಡಿಂಕ ಗ್ರಾಮದ ಮಹಿಳೆ ಮಂಗಳಮ್ಮ ೨೦೨೫ರ ದಕ್ಷಿಣ ಡೇರಿ ಶೃಂಗ ಸಭೆಯಲ್ಲಿ ಅತ್ಯುತ್ತಮ ಹೈನುಗಾರ್ತಿ ಪ್ರಶಸ್ತಿ ಪಡೆದಿರುವುದು ರಾಜ್ಯವೇ ಹೆಮ್ಮೆ ಪಡುವ ವಿಚಾರ.

ಮಂಗಳಮ್ಮ ಓದಿದ್ದು ಕೇವಲ ೫ನೇ ತರಗತಿ ಯಾದರೂ ಹೈನುಗಾರಿಕೆಯಲ್ಲಿ ಸಂಪೂರ್ಣ ಜ್ಞಾನವನ್ನು ಹೊಂದಿದ್ದಾರೆ. ೨೦ ವರ್ಷಗಳ ಹಿಂದೆ ಕೇವಲ ಒಂದು ಹಸುವಿನಿಂದ ಹೈನುಗಾರಿಕೆ ಪ್ರಾರಂಭಿಸಿದ ಇವರು ಇಂದು ೩೦ ಹೈಬ್ರಿಡ್ ತಳಿಯ ಹಸುಗಳನ್ನು ಸಾಕಿ ಹಾಲು ಉತ್ಪಾದನೆ ಮಾಡುತ್ತಿದ್ದಾರೆ. ಕಳೆದ ಒಂದು ವರ್ಷದಲ್ಲಿ ಒಂದು ಲಕ್ಷ ಲೀಟರ್‌ಗೂ ಅಧಿಕ ಹಾಲನ್ನು ಉತ್ಪಾದಿಸಿ ಡಿಂಕ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಸರಬರಾಜು ಮಾಡುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಆ ಮೂಲಕ ಒಂದು ವರ್ಷದಲ್ಲಿ ೩೦ ಲಕ್ಷ ರೂಪಾಯಿ ಆದಾಯವನ್ನೂ ಗಳಿಸಿದ್ದಾರೆ.

ಮಂಗಳಮ್ಮನವರ ಸತತ ಪ್ರಯತ್ನ, ಕೆಲಸದ ಮೇಲಿನ ಶ್ರದ್ಧೆ ಫಲ ನೀಡಿದೆ. ಮಹಿಳೆಯರು ಸ್ವಾವಲಂಬಿಯಾಗಿ ಶ್ರಮಪಟ್ಟು ದುಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಂಗಳಮ್ಮರವರೇ ಮಾದರಿ. ಹೈನುಗಾರಿಕೆ ಮಾಡುವವರು ಮಂಗಳಮ್ಮನವರನ್ನು ಮಾದರಿಯಾಗಿ ಅನುಸರಿಸಿ ಅವರಂತೆ ಶ್ರಮಿಸಬೇಕು. ಸರ್ಕಾರ ಇವರ ಸಾಧನೆಯನ್ನು ಗುರುತಿಸಿ ಕರ್ನಾಟಕದ ಪ್ರತಿಷ್ಠಿತ ನಂದಿನಿ ಹಾಲಿನ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

1 hour ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

2 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

2 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

2 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

3 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

4 hours ago