ಮೈಸೂರಿನ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮವು ಅನೇಕ ತೊಡಕುಗಳಿಂದ ಕೂಡಿದ್ದು, ವ್ಯವಸ್ಥಿತವಾಗಿ ಆಯೋಜನೆಗೊಂಡಿರಲಿಲ್ಲ ಎಂದೆನಿಸಿತು.
ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನೃತ್ಯ ತಂಡಗಳ ಆಯ್ಕೆಯಲ್ಲಿಯೂ ಯಾವುದೇ ಮಾನದಂಡಗಳಿರಲಿಲ್ಲ. ಇದರಿಂದಾಗಿ ಸಾಕಷ್ಟು ನೃತ್ಯಗಳು ಪುನರಾವರ್ತನೆಯಾದವು, ಅಲ್ಲದೆ ಭಾಗವಹಿಸುವ ತಂಡಗಳ ಸಂಖ್ಯೆಯೂ ಹೆಚ್ಚಾಗಿದ್ದರಿಂದ ಅನೇಕ ತಂಡಗಳಿಗೆ ಪೂರ್ಣ ನೃತ್ಯ ಮಾಡಲು ಅವಕಾಶ ನೀಡದೆ ಆಯೋಜಕರು ತಮ್ಮಿಚ್ಛೆಯಂತ ಅರ್ಧದಲ್ಲಿಯೇ ದೃಶ್ಯಗಳನ್ನು ನಿಲ್ಲಿಸಿದರು. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ವೇದಕೆ ಹತ್ತುವ ಅವಕಾಶವೇ ಸಿಗಲಿಲ್ಲ, ಅಲ್ಲದೆ ದೂರದ ಊರುಗಳಿಂದ ಬಂದಿದ್ದ : ನೃತ್ಯವನ್ನು ಪ್ರದರ್ಶಿಸಲಾಗದೆ ನಿರಾಸೆಯಿಂದ ಹಿಂದಿರುಗುವಂತಾಯಿತು.
ಮುಂದಿನ ಬಾರಿಯಾದರೂ ಆಯೋಜಕರು ಯುವಸಂಭ್ರಮ ಕಾರ್ಯಕ್ರಮವನ್ನು ಯಾವುದೇ ತೊಡಕುಗಳಿಲ್ಲದೆ ಯಶಸ್ವಿಯಾಗಿ ಆಯೋಜಿಸಲಿ.
-ಸೇವಂತಿ, ಚಾಮರಾಜಪುರಂ, ಮೈಸೂರು.
ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…