Andolana originals

ಓದುಗರ ಪತ್ರ: ಅಂಬೇಡ್ಕರ್ ಭವನ ಸದ್ಬಳಕೆಯಾಗಲಿ

ನಂಜನಗೂಡು ತಾಲ್ಲೂಕು, ಕೂಡ್ಲಾಪುರ ಗ್ರಾಮದಲ್ಲಿ ಸುಮಾರು ೧೨ ಲಕ್ಷ ರೂ.ಗಳ ವೆಚ್ಚದಲ್ಲಿ ೫ ವರ್ಷದ ಹಿಂದೆ ಅಂಬೇಡ್ಕರ್ ಭವನವನ್ನು ನಿರ್ಮಿಸಲಾಗಿದೆ. ಆದರೆ ಗ್ರಾಮಪಂಚಾಯಿತಿಯಿಂದ ಕಟ್ಟಡ ನಿರ್ಮಾಣ ಪರವಾನಗಿ ಪಡೆದಿರುವುದಿಲ್ಲ. ಈ ಕಟ್ಟಡಕ್ಕೆ ಹೋಗುವುದಕ್ಕೆ, ಬರುವುದಕ್ಕೆ ರಸ್ತೆಯೂ ಇಲ್ಲ. ಕೊಳಚೆ ಪ್ರದೇಶದಲ್ಲಿ ಈ ಭವನವನ್ನು ನಿರ್ಮಿಸಲಾಗಿದ್ದು, ೩-೪ ತಿಂಗಳಿಗೊಮ್ಮೆ ಸುತ್ತಲೂ ಗಿಡಗಂಟಿ ಬೆಳೆದು ಇದನ್ನು ತೆಗೆಸುವುದಕ್ಕೆ ೨ ಬಾರಿ ಲಕ್ಷಾಂತರ ರೂ. ಖರ್ಚು ಮಾಡಲಾಗಿದೆ.

ಗ್ರಾಮದ ಮಹಿಳೆಯರು ಬಯಲು ಶೌಚಕ್ಕೆ ಅಂಬೇಡ್ಕರ್ ಭವನದ ಆವರಣವನ್ನು ಉಪಯೋಗಿಸುತ್ತಿದ್ದಾರೆ. ಅಂಬೇಡ್ಕರ್ ಭವನದ ಉದ್ಘಾಟನಾ ಸಮಾರಂಭವೂ ಅಧಿಕೃತವಾಗಿ ನಡೆದಿಲ್ಲ. ಈ ವಿಷಯವನ್ನು ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ತಿಳಿಸಲಾಗಿದ್ದು, ಲೋಕಾಯುಕ್ತ ವೃತ್ತ ನಿರೀಕ್ಷಕರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡು ಹೋಗಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಸಂಬಂಧಪಟ್ಟವರು ಕೂಡಲೇ ಭವನಕ್ಕೆ ರಸ್ತೆ ಸೌಲಭ್ಯ ಕಲ್ಪಿಸುವುದರೊಂದಿಗೆ ಸಾರ್ವಜನಿಕ ಸಮಾರಂಭಗಳಿಗೆ ಈ ಭವನ ಬಳಕೆಯಾಗುವಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

 -ಮಹದೇವಯ್ಯ, ಕೂಡ್ಲಾಪುರ, ನಂಜನಗೂಡು ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

3 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

3 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

3 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

3 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

3 hours ago