Andolana originals

ಓದುಗರ ಪತ್ರ: ಅಂಬೇಡ್ಕರ್ ಭವನ ಸದ್ಬಳಕೆಯಾಗಲಿ

ನಂಜನಗೂಡು ತಾಲ್ಲೂಕು, ಕೂಡ್ಲಾಪುರ ಗ್ರಾಮದಲ್ಲಿ ಸುಮಾರು ೧೨ ಲಕ್ಷ ರೂ.ಗಳ ವೆಚ್ಚದಲ್ಲಿ ೫ ವರ್ಷದ ಹಿಂದೆ ಅಂಬೇಡ್ಕರ್ ಭವನವನ್ನು ನಿರ್ಮಿಸಲಾಗಿದೆ. ಆದರೆ ಗ್ರಾಮಪಂಚಾಯಿತಿಯಿಂದ ಕಟ್ಟಡ ನಿರ್ಮಾಣ ಪರವಾನಗಿ ಪಡೆದಿರುವುದಿಲ್ಲ. ಈ ಕಟ್ಟಡಕ್ಕೆ ಹೋಗುವುದಕ್ಕೆ, ಬರುವುದಕ್ಕೆ ರಸ್ತೆಯೂ ಇಲ್ಲ. ಕೊಳಚೆ ಪ್ರದೇಶದಲ್ಲಿ ಈ ಭವನವನ್ನು ನಿರ್ಮಿಸಲಾಗಿದ್ದು, ೩-೪ ತಿಂಗಳಿಗೊಮ್ಮೆ ಸುತ್ತಲೂ ಗಿಡಗಂಟಿ ಬೆಳೆದು ಇದನ್ನು ತೆಗೆಸುವುದಕ್ಕೆ ೨ ಬಾರಿ ಲಕ್ಷಾಂತರ ರೂ. ಖರ್ಚು ಮಾಡಲಾಗಿದೆ.

ಗ್ರಾಮದ ಮಹಿಳೆಯರು ಬಯಲು ಶೌಚಕ್ಕೆ ಅಂಬೇಡ್ಕರ್ ಭವನದ ಆವರಣವನ್ನು ಉಪಯೋಗಿಸುತ್ತಿದ್ದಾರೆ. ಅಂಬೇಡ್ಕರ್ ಭವನದ ಉದ್ಘಾಟನಾ ಸಮಾರಂಭವೂ ಅಧಿಕೃತವಾಗಿ ನಡೆದಿಲ್ಲ. ಈ ವಿಷಯವನ್ನು ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ತಿಳಿಸಲಾಗಿದ್ದು, ಲೋಕಾಯುಕ್ತ ವೃತ್ತ ನಿರೀಕ್ಷಕರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡು ಹೋಗಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಸಂಬಂಧಪಟ್ಟವರು ಕೂಡಲೇ ಭವನಕ್ಕೆ ರಸ್ತೆ ಸೌಲಭ್ಯ ಕಲ್ಪಿಸುವುದರೊಂದಿಗೆ ಸಾರ್ವಜನಿಕ ಸಮಾರಂಭಗಳಿಗೆ ಈ ಭವನ ಬಳಕೆಯಾಗುವಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

 -ಮಹದೇವಯ್ಯ, ಕೂಡ್ಲಾಪುರ, ನಂಜನಗೂಡು ತಾ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

47 mins ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

1 hour ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

1 hour ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

2 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

3 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

3 hours ago