ಓದುಗರ ಪತ್ರ
ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಿಂದೆ ವಿಶೇಷ ದಿನಗಳಲ್ಲಿ ಮಾತ್ರ ಹೆಚ್ಚಿನ ಜನಜಂಗುಳಿ ಕಂಡುಬರುತ್ತಿತ್ತು. ಆದರೆ ಈಗ ಪ್ರತಿದಿನವೂ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ಸಾಮಾನ್ಯವಾಗಿ ಎಲ್ಲ ದೇವಸ್ಥಾನಗಳಲ್ಲೂ ದೇವರ ಹೆಸರಿನಲ್ಲಿ ಮುಡಿ ಕೊಟ್ಟು ಹರಕೆ ತೀರಿಸುವ ಸಂಪ್ರದಾಯವಿದೆ. ಹರಕೆ ತೀರಿಸುವ ಸಂದರ್ಭದಲ್ಲಿ ಜನರು ತಾವು ಧರಿಸಿದ್ದ ಬಟ್ಟೆಗಳನ್ನು ನದಿಯಲ್ಲಿ ಹಾಕುವುದು, ಸೋಪು ಹಾಗೂ ಶ್ಯಾಂಪು ಪೌಚ್ಗಳು, ಗಂಧದ ಕಡ್ಡಿ ಪ್ಯಾಕೆಟ್ಗಳನ್ನು ನದಿಯಲ್ಲಿ ಎಸೆಯುವುದು, ತಮ್ಮ ಮನೆಗಳಲ್ಲಿ ಇರಿಸಿದ್ದ ಪೂಜಾ ಸಾಮಗ್ರಿಗಳು, ದೇವರಿಗೆ ಧರಿಸಿದ್ದ ಹೂವನ್ನು ಪ್ಲಾಸ್ಟಿಕ್ ಚೀಲದಲ್ಲಿ ತಂದು ನದಿಗೆ ಹಾಕಿ ದೇವರ ಹರಕೆ ತೀರಿತೆಂದು ಕೈಮುಗಿದು ಮನೆಗೆ ಹೋಗುವುದರಿಂದ ಯಾವ ಪ್ರಯೋಜನವೂ ಆಗದು. ಅಂತಹ ಡಾಂಬಿಕ ಭಕ್ತಿ ಬಹುಶಃ ದೇವರಿಗೂ ಪ್ರೀತಿ ಎನಿಸಿದು. ಜನರ ಇಂತಹ ನಡೆ ಪರಿಸರಕ್ಕೂ ಪೂರಕವಾಗಿ ರುವುದಿಲ್ಲ. ನದಿಯಲ್ಲಿ ಭಕ್ತಿಯ ಹೆಸರಿನಲ್ಲಿ ಜನರು ಬಿಸಾಡಿ ಹೋಗುವ ತ್ಯಾಜ್ಯಗಳನ್ನು ಸಂಘ ಸಂಸ್ಥೆಗಳು ತೆರವು ಗೊಳಿಸಿ, ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದರೂ ನಾಗರಿಕ ಸಮಾಜ ಎಚ್ಚೆತ್ತುಕೊಳ್ಳದಿರುವುದು ವಿಪರ್ಯಾಸವೇ ಸರಿ. ಪುಣ್ಯ ಕ್ಷೇತ್ರಗಳಿಗೆ ತೆರಳುವವರು ದೇವಸ್ಥಾನದ ಸುತ್ತ ಮುತ್ತಲ ಪರಿಸರದ ಸ್ವಚ್ಛತೆಗೂ ಆದ್ಯತೆ ನೀಡಬೇಕು. ಪವಿತ್ರ ಸ್ಥಳಗಳಲ್ಲಿ ಅನೈರ್ಮಲ್ಯ ಸೃಷ್ಟಿಸುವ ಕೆಲಸವನ್ನು ಕೈಬಿಡಬೇಕಿದೆ.ದೇವಸ್ಥಾನ ಆಡಳಿತ ಮಂಡಳಿಯವರು ಕಸದ ಬುಟ್ಟಿಗಳನ್ನು ಅಲ್ಲಲ್ಲಿ ಇರಿಸಿ ಜನರಿಗೆ ತಿಳಿವಳಿಕೆ ಮೂಡಿಸುವ ಕೆಲಸ ಮಾಡಲಿ.
– ಪ್ರಸನ್ನಕುಮಾರ್ ಎಂ.ಬದನಗುಪ್ಪೆ.
ಶೇಷಾದ್ರಿ ಗಂಜೂರು: ಮಾಧ್ಯಮ ತಜ್ಞರು ಟೆಹರಾನ್: ಮಧ್ಯಪ್ರಾಚ್ಯದ ಸಂಘರ್ಷಗಳ ಸಮಯದಲ್ಲಿ ಜಾಗತಿಕ ತೈಲ ಬೆಲೆ ಗಗನಕ್ಕೇರುವುದು, ಇದರಿಂದ ಸಾರಿಗೆ ವೆಚ್ಚ…
ಬಂಡೀಪುರ, ನಾಗರಹೊಳೆ: ನಾಗರಹೊಳೆ ಬಂಡೀಪುರದಲ್ಲಿ ಸಫಾರಿ ಪುನರಾರಂಭವಾದ ಸಂತೋಷ ಒಂದೆಡೆಯಾದರೆ, ಸಫಾರಿ ವೇಳೆ ಮೊಬೈಲ್ ಬಳಕೆಗೆ ನಿಷೇಧವೇರಿರುವುದು ಕೆಲ ಸಫಾರಿ…
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…