Andolana originals

ಓದುಗರ ಪತ್ರ: ದೇವರ ಮೇಲಿನ ಭಕ್ತಿ ಪರಿಸರಕ್ಕೆ ಮಾರಕವಾಗದಿರಲಿ

ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಿಂದೆ ವಿಶೇಷ ದಿನಗಳಲ್ಲಿ ಮಾತ್ರ ಹೆಚ್ಚಿನ ಜನಜಂಗುಳಿ ಕಂಡುಬರುತ್ತಿತ್ತು. ಆದರೆ ಈಗ ಪ್ರತಿದಿನವೂ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ಸಾಮಾನ್ಯವಾಗಿ ಎಲ್ಲ ದೇವಸ್ಥಾನಗಳಲ್ಲೂ ದೇವರ ಹೆಸರಿನಲ್ಲಿ ಮುಡಿ ಕೊಟ್ಟು ಹರಕೆ ತೀರಿಸುವ ಸಂಪ್ರದಾಯವಿದೆ. ಹರಕೆ ತೀರಿಸುವ ಸಂದರ್ಭದಲ್ಲಿ ಜನರು ತಾವು ಧರಿಸಿದ್ದ ಬಟ್ಟೆಗಳನ್ನು ನದಿಯಲ್ಲಿ ಹಾಕುವುದು, ಸೋಪು ಹಾಗೂ ಶ್ಯಾಂಪು ಪೌಚ್‌ಗಳು, ಗಂಧದ ಕಡ್ಡಿ ಪ್ಯಾಕೆಟ್‌ಗಳನ್ನು ನದಿಯಲ್ಲಿ ಎಸೆಯುವುದು, ತಮ್ಮ ಮನೆಗಳಲ್ಲಿ ಇರಿಸಿದ್ದ ಪೂಜಾ ಸಾಮಗ್ರಿಗಳು, ದೇವರಿಗೆ ಧರಿಸಿದ್ದ ಹೂವನ್ನು ಪ್ಲಾಸ್ಟಿಕ್ ಚೀಲದಲ್ಲಿ ತಂದು ನದಿಗೆ ಹಾಕಿ ದೇವರ ಹರಕೆ ತೀರಿತೆಂದು ಕೈಮುಗಿದು ಮನೆಗೆ ಹೋಗುವುದರಿಂದ ಯಾವ ಪ್ರಯೋಜನವೂ ಆಗದು. ಅಂತಹ ಡಾಂಬಿಕ ಭಕ್ತಿ ಬಹುಶಃ ದೇವರಿಗೂ ಪ್ರೀತಿ ಎನಿಸಿದು. ಜನರ ಇಂತಹ ನಡೆ ಪರಿಸರಕ್ಕೂ ಪೂರಕವಾಗಿ ರುವುದಿಲ್ಲ. ನದಿಯಲ್ಲಿ ಭಕ್ತಿಯ ಹೆಸರಿನಲ್ಲಿ ಜನರು ಬಿಸಾಡಿ ಹೋಗುವ ತ್ಯಾಜ್ಯಗಳನ್ನು ಸಂಘ ಸಂಸ್ಥೆಗಳು ತೆರವು ಗೊಳಿಸಿ, ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದರೂ ನಾಗರಿಕ ಸಮಾಜ ಎಚ್ಚೆತ್ತುಕೊಳ್ಳದಿರುವುದು ವಿಪರ್ಯಾಸವೇ ಸರಿ. ಪುಣ್ಯ ಕ್ಷೇತ್ರಗಳಿಗೆ ತೆರಳುವವರು ದೇವಸ್ಥಾನದ ಸುತ್ತ ಮುತ್ತಲ ಪರಿಸರದ ಸ್ವಚ್ಛತೆಗೂ ಆದ್ಯತೆ ನೀಡಬೇಕು. ಪವಿತ್ರ ಸ್ಥಳಗಳಲ್ಲಿ ಅನೈರ್ಮಲ್ಯ ಸೃಷ್ಟಿಸುವ ಕೆಲಸವನ್ನು ಕೈಬಿಡಬೇಕಿದೆ.ದೇವಸ್ಥಾನ ಆಡಳಿತ ಮಂಡಳಿಯವರು ಕಸದ ಬುಟ್ಟಿಗಳನ್ನು ಅಲ್ಲಲ್ಲಿ ಇರಿಸಿ ಜನರಿಗೆ ತಿಳಿವಳಿಕೆ ಮೂಡಿಸುವ ಕೆಲಸ ಮಾಡಲಿ.

– ಪ್ರಸನ್ನಕುಮಾರ್ ಎಂ.ಬದನಗುಪ್ಪೆ.

 

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

15 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

16 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

16 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

21 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

22 hours ago