ಓದುಗರ ಪತ್ರ
ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಿಂದೆ ವಿಶೇಷ ದಿನಗಳಲ್ಲಿ ಮಾತ್ರ ಹೆಚ್ಚಿನ ಜನಜಂಗುಳಿ ಕಂಡುಬರುತ್ತಿತ್ತು. ಆದರೆ ಈಗ ಪ್ರತಿದಿನವೂ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ಸಾಮಾನ್ಯವಾಗಿ ಎಲ್ಲ ದೇವಸ್ಥಾನಗಳಲ್ಲೂ ದೇವರ ಹೆಸರಿನಲ್ಲಿ ಮುಡಿ ಕೊಟ್ಟು ಹರಕೆ ತೀರಿಸುವ ಸಂಪ್ರದಾಯವಿದೆ. ಹರಕೆ ತೀರಿಸುವ ಸಂದರ್ಭದಲ್ಲಿ ಜನರು ತಾವು ಧರಿಸಿದ್ದ ಬಟ್ಟೆಗಳನ್ನು ನದಿಯಲ್ಲಿ ಹಾಕುವುದು, ಸೋಪು ಹಾಗೂ ಶ್ಯಾಂಪು ಪೌಚ್ಗಳು, ಗಂಧದ ಕಡ್ಡಿ ಪ್ಯಾಕೆಟ್ಗಳನ್ನು ನದಿಯಲ್ಲಿ ಎಸೆಯುವುದು, ತಮ್ಮ ಮನೆಗಳಲ್ಲಿ ಇರಿಸಿದ್ದ ಪೂಜಾ ಸಾಮಗ್ರಿಗಳು, ದೇವರಿಗೆ ಧರಿಸಿದ್ದ ಹೂವನ್ನು ಪ್ಲಾಸ್ಟಿಕ್ ಚೀಲದಲ್ಲಿ ತಂದು ನದಿಗೆ ಹಾಕಿ ದೇವರ ಹರಕೆ ತೀರಿತೆಂದು ಕೈಮುಗಿದು ಮನೆಗೆ ಹೋಗುವುದರಿಂದ ಯಾವ ಪ್ರಯೋಜನವೂ ಆಗದು. ಅಂತಹ ಡಾಂಬಿಕ ಭಕ್ತಿ ಬಹುಶಃ ದೇವರಿಗೂ ಪ್ರೀತಿ ಎನಿಸಿದು. ಜನರ ಇಂತಹ ನಡೆ ಪರಿಸರಕ್ಕೂ ಪೂರಕವಾಗಿ ರುವುದಿಲ್ಲ. ನದಿಯಲ್ಲಿ ಭಕ್ತಿಯ ಹೆಸರಿನಲ್ಲಿ ಜನರು ಬಿಸಾಡಿ ಹೋಗುವ ತ್ಯಾಜ್ಯಗಳನ್ನು ಸಂಘ ಸಂಸ್ಥೆಗಳು ತೆರವು ಗೊಳಿಸಿ, ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದರೂ ನಾಗರಿಕ ಸಮಾಜ ಎಚ್ಚೆತ್ತುಕೊಳ್ಳದಿರುವುದು ವಿಪರ್ಯಾಸವೇ ಸರಿ. ಪುಣ್ಯ ಕ್ಷೇತ್ರಗಳಿಗೆ ತೆರಳುವವರು ದೇವಸ್ಥಾನದ ಸುತ್ತ ಮುತ್ತಲ ಪರಿಸರದ ಸ್ವಚ್ಛತೆಗೂ ಆದ್ಯತೆ ನೀಡಬೇಕು. ಪವಿತ್ರ ಸ್ಥಳಗಳಲ್ಲಿ ಅನೈರ್ಮಲ್ಯ ಸೃಷ್ಟಿಸುವ ಕೆಲಸವನ್ನು ಕೈಬಿಡಬೇಕಿದೆ.ದೇವಸ್ಥಾನ ಆಡಳಿತ ಮಂಡಳಿಯವರು ಕಸದ ಬುಟ್ಟಿಗಳನ್ನು ಅಲ್ಲಲ್ಲಿ ಇರಿಸಿ ಜನರಿಗೆ ತಿಳಿವಳಿಕೆ ಮೂಡಿಸುವ ಕೆಲಸ ಮಾಡಲಿ.
– ಪ್ರಸನ್ನಕುಮಾರ್ ಎಂ.ಬದನಗುಪ್ಪೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…