Andolana originals

ಓದುಗರ ಪತ್ರ: ದೇವರ ಮೇಲಿನ ಭಕ್ತಿ ಪರಿಸರಕ್ಕೆ ಮಾರಕವಾಗದಿರಲಿ

ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಿಂದೆ ವಿಶೇಷ ದಿನಗಳಲ್ಲಿ ಮಾತ್ರ ಹೆಚ್ಚಿನ ಜನಜಂಗುಳಿ ಕಂಡುಬರುತ್ತಿತ್ತು. ಆದರೆ ಈಗ ಪ್ರತಿದಿನವೂ ದೇವಸ್ಥಾನಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ಸಾಮಾನ್ಯವಾಗಿ ಎಲ್ಲ ದೇವಸ್ಥಾನಗಳಲ್ಲೂ ದೇವರ ಹೆಸರಿನಲ್ಲಿ ಮುಡಿ ಕೊಟ್ಟು ಹರಕೆ ತೀರಿಸುವ ಸಂಪ್ರದಾಯವಿದೆ. ಹರಕೆ ತೀರಿಸುವ ಸಂದರ್ಭದಲ್ಲಿ ಜನರು ತಾವು ಧರಿಸಿದ್ದ ಬಟ್ಟೆಗಳನ್ನು ನದಿಯಲ್ಲಿ ಹಾಕುವುದು, ಸೋಪು ಹಾಗೂ ಶ್ಯಾಂಪು ಪೌಚ್‌ಗಳು, ಗಂಧದ ಕಡ್ಡಿ ಪ್ಯಾಕೆಟ್‌ಗಳನ್ನು ನದಿಯಲ್ಲಿ ಎಸೆಯುವುದು, ತಮ್ಮ ಮನೆಗಳಲ್ಲಿ ಇರಿಸಿದ್ದ ಪೂಜಾ ಸಾಮಗ್ರಿಗಳು, ದೇವರಿಗೆ ಧರಿಸಿದ್ದ ಹೂವನ್ನು ಪ್ಲಾಸ್ಟಿಕ್ ಚೀಲದಲ್ಲಿ ತಂದು ನದಿಗೆ ಹಾಕಿ ದೇವರ ಹರಕೆ ತೀರಿತೆಂದು ಕೈಮುಗಿದು ಮನೆಗೆ ಹೋಗುವುದರಿಂದ ಯಾವ ಪ್ರಯೋಜನವೂ ಆಗದು. ಅಂತಹ ಡಾಂಬಿಕ ಭಕ್ತಿ ಬಹುಶಃ ದೇವರಿಗೂ ಪ್ರೀತಿ ಎನಿಸಿದು. ಜನರ ಇಂತಹ ನಡೆ ಪರಿಸರಕ್ಕೂ ಪೂರಕವಾಗಿ ರುವುದಿಲ್ಲ. ನದಿಯಲ್ಲಿ ಭಕ್ತಿಯ ಹೆಸರಿನಲ್ಲಿ ಜನರು ಬಿಸಾಡಿ ಹೋಗುವ ತ್ಯಾಜ್ಯಗಳನ್ನು ಸಂಘ ಸಂಸ್ಥೆಗಳು ತೆರವು ಗೊಳಿಸಿ, ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದರೂ ನಾಗರಿಕ ಸಮಾಜ ಎಚ್ಚೆತ್ತುಕೊಳ್ಳದಿರುವುದು ವಿಪರ್ಯಾಸವೇ ಸರಿ. ಪುಣ್ಯ ಕ್ಷೇತ್ರಗಳಿಗೆ ತೆರಳುವವರು ದೇವಸ್ಥಾನದ ಸುತ್ತ ಮುತ್ತಲ ಪರಿಸರದ ಸ್ವಚ್ಛತೆಗೂ ಆದ್ಯತೆ ನೀಡಬೇಕು. ಪವಿತ್ರ ಸ್ಥಳಗಳಲ್ಲಿ ಅನೈರ್ಮಲ್ಯ ಸೃಷ್ಟಿಸುವ ಕೆಲಸವನ್ನು ಕೈಬಿಡಬೇಕಿದೆ.ದೇವಸ್ಥಾನ ಆಡಳಿತ ಮಂಡಳಿಯವರು ಕಸದ ಬುಟ್ಟಿಗಳನ್ನು ಅಲ್ಲಲ್ಲಿ ಇರಿಸಿ ಜನರಿಗೆ ತಿಳಿವಳಿಕೆ ಮೂಡಿಸುವ ಕೆಲಸ ಮಾಡಲಿ.

– ಪ್ರಸನ್ನಕುಮಾರ್ ಎಂ.ಬದನಗುಪ್ಪೆ.

 

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago