Andolana originals

ಓದುಗರ ಪತ್ರ: ದಸರಾ ದುಬಾರಿಯಾಗದಿರಲಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆ.೨೨ ರಿಂದ ಆರಂಭವಾಗಿದ್ದು, ಅಕ್ಟೋಬರ್ ೨ ರವರೆಗೆ ಅದ್ಧೂರಿಯಾಗಿ ಜರುಗಲಿದೆ. ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಸುಮಾರು ೬೦ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ ಅನೇಕ ಜನಾಕರ್ಷಣೀಯ ಮತ್ತು ಮನರಂಜನಾ ಕಾರ್ಯಕ್ರಮಗಳ ಪ್ರವೇಶ ಶುಲ್ಕ ದುಬಾರಿಯಾಗಿರುವುದು ಜನರಲ್ಲಿ ಬೇಸರ ತರಿಸಿದೆ. ಈ ಬಾರಿಯೂ ಯುವ ದಸರಾ ವೀಕ್ಷಣೆಗೆ ದರ ನಿಗದಿ ಮಾಡಿದ್ದು, ಟಿಕೆಟ್ ವ್ಯವಸ್ಥೆಯನ್ನು ಮಾಡಲಾಗಿದೆ.

ಒಟ್ಟಾರೆ ೨೦ ಸಾವಿರ ಆಸನಗಳ ವ್ಯವಸ್ಥೆ ಮಾಡಿದ್ದು, ಈ ಪೈಕಿ ೫ ಸಾವಿರ ರೂ. ಟಿಕೆಟ್ ಹಾಗೂ ೨,೫೦೦ ರೂ. ಟಿಕೆಟ್‌ಗಳಿಗೆ ರೂ.೫೦೦ ಆಸನಗಳ ಗ್ಯಾಲರಿಗಳಲ್ಲಿ ಸ್ಥಳ ವ್ಯವಸ್ಥೆಗೊಳಿಸಲಾಗಿದೆ. ಇದಲ್ಲದೆ ಅಂಬಾರಿ ಬಸ್ ಪ್ರಯಾಣ ದರ ರೂ. ೫೦೦, ದಸರಾ ಗೋಲ್ಡ್ ಕಾರ್ಡ್‌ಗೆ ರೂ. ೬,೫೦೦. ಜಂಬೂಸವಾರಿ ವೀಕ್ಷಣೆಗೆ ರೂ.೩,೫೦೦. ಪಂಜಿನ ಕವಾಯತು ವೀಕ್ಷಣೆ ರೂ.೧೫೦೦. ಡ್ರೋನ್ ಶೋಗೆ ರೂ. ೧೫೦೦. ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ರೂ. ೫೦ ನಿಗದಿ ಮಾಡಲಾಗಿದ್ದು ಈ ಬಾರಿಯೂ ದಸರಾ ವೀಕ್ಷಣೆಯು ತುಂಬಾ ದುಬಾರಿಯಾಗಿದೆ ಎಂದು ಜನ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ರಾಜಕೀಯ ಮುಖಂಡರ ಹಿಂಬಾಲಕರಿಗೆ ಮಾತ್ರ ಉಚಿತ ಪಾಸ್‌ಗಳು ದೊರಕುತ್ತಿದ್ದು, ಸಾಮಾನ್ಯ ಜನರಿಗೆ ದಸರಾ ವೀಕ್ಷಣೆ ಅಸಾಧ್ಯವಾಗಿದೆ.

ನಾಡಿನ ವಿವಿಧ ಮೂಲೆಗಳಿಂದ ಆಗಮಿಸುವ ಪ್ರವಾಸಿಗರ ಜೇಬಿಗೆ ಕತ್ತರಿ ಬೀಳುವುದು ಗ್ಯಾರಂಟಿಯಾಗಿದೆ. ಈಗಾಗಲೇ ಟಿಕೆಟ್ ದರದ ಹೆಚ್ಚಳದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ದಸರಾ ನಡೆಸುವುದು ದುಡ್ಡಿಗಾಗಿಯೇ ಎಂಬ ಮನೋಭಾವನೆ ಸಾರ್ವಜನಿಕರಲ್ಲಿ ಮನೆ ಮಾಡುತ್ತಿದೆ. ಆದ್ದರಿಂದ ಈ ಬಾರಿಯ ದಸರಾವು ದುಬಾರಿಯಾಗದೆ ಜನಸಾಮಾನ್ಯರ ದಸರಾವಾಗಲಿ ಎಂಬುದೇ ಸಾರ್ವಜನಿಕರ ಒಕ್ಕೊರಲಿನ ಅಭಿಪ್ರಾಯವಾಗಿದೆ.

 -ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

2 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

2 hours ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

2 hours ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

3 hours ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

3 hours ago