Andolana originals

ಓದುಗರ ಪತ್ರ: ದಸರಾ ದುಬಾರಿಯಾಗದಿರಲಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆ.೨೨ ರಿಂದ ಆರಂಭವಾಗಿದ್ದು, ಅಕ್ಟೋಬರ್ ೨ ರವರೆಗೆ ಅದ್ಧೂರಿಯಾಗಿ ಜರುಗಲಿದೆ. ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಸುಮಾರು ೬೦ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ ಅನೇಕ ಜನಾಕರ್ಷಣೀಯ ಮತ್ತು ಮನರಂಜನಾ ಕಾರ್ಯಕ್ರಮಗಳ ಪ್ರವೇಶ ಶುಲ್ಕ ದುಬಾರಿಯಾಗಿರುವುದು ಜನರಲ್ಲಿ ಬೇಸರ ತರಿಸಿದೆ. ಈ ಬಾರಿಯೂ ಯುವ ದಸರಾ ವೀಕ್ಷಣೆಗೆ ದರ ನಿಗದಿ ಮಾಡಿದ್ದು, ಟಿಕೆಟ್ ವ್ಯವಸ್ಥೆಯನ್ನು ಮಾಡಲಾಗಿದೆ.

ಒಟ್ಟಾರೆ ೨೦ ಸಾವಿರ ಆಸನಗಳ ವ್ಯವಸ್ಥೆ ಮಾಡಿದ್ದು, ಈ ಪೈಕಿ ೫ ಸಾವಿರ ರೂ. ಟಿಕೆಟ್ ಹಾಗೂ ೨,೫೦೦ ರೂ. ಟಿಕೆಟ್‌ಗಳಿಗೆ ರೂ.೫೦೦ ಆಸನಗಳ ಗ್ಯಾಲರಿಗಳಲ್ಲಿ ಸ್ಥಳ ವ್ಯವಸ್ಥೆಗೊಳಿಸಲಾಗಿದೆ. ಇದಲ್ಲದೆ ಅಂಬಾರಿ ಬಸ್ ಪ್ರಯಾಣ ದರ ರೂ. ೫೦೦, ದಸರಾ ಗೋಲ್ಡ್ ಕಾರ್ಡ್‌ಗೆ ರೂ. ೬,೫೦೦. ಜಂಬೂಸವಾರಿ ವೀಕ್ಷಣೆಗೆ ರೂ.೩,೫೦೦. ಪಂಜಿನ ಕವಾಯತು ವೀಕ್ಷಣೆ ರೂ.೧೫೦೦. ಡ್ರೋನ್ ಶೋಗೆ ರೂ. ೧೫೦೦. ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ರೂ. ೫೦ ನಿಗದಿ ಮಾಡಲಾಗಿದ್ದು ಈ ಬಾರಿಯೂ ದಸರಾ ವೀಕ್ಷಣೆಯು ತುಂಬಾ ದುಬಾರಿಯಾಗಿದೆ ಎಂದು ಜನ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ರಾಜಕೀಯ ಮುಖಂಡರ ಹಿಂಬಾಲಕರಿಗೆ ಮಾತ್ರ ಉಚಿತ ಪಾಸ್‌ಗಳು ದೊರಕುತ್ತಿದ್ದು, ಸಾಮಾನ್ಯ ಜನರಿಗೆ ದಸರಾ ವೀಕ್ಷಣೆ ಅಸಾಧ್ಯವಾಗಿದೆ.

ನಾಡಿನ ವಿವಿಧ ಮೂಲೆಗಳಿಂದ ಆಗಮಿಸುವ ಪ್ರವಾಸಿಗರ ಜೇಬಿಗೆ ಕತ್ತರಿ ಬೀಳುವುದು ಗ್ಯಾರಂಟಿಯಾಗಿದೆ. ಈಗಾಗಲೇ ಟಿಕೆಟ್ ದರದ ಹೆಚ್ಚಳದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ದಸರಾ ನಡೆಸುವುದು ದುಡ್ಡಿಗಾಗಿಯೇ ಎಂಬ ಮನೋಭಾವನೆ ಸಾರ್ವಜನಿಕರಲ್ಲಿ ಮನೆ ಮಾಡುತ್ತಿದೆ. ಆದ್ದರಿಂದ ಈ ಬಾರಿಯ ದಸರಾವು ದುಬಾರಿಯಾಗದೆ ಜನಸಾಮಾನ್ಯರ ದಸರಾವಾಗಲಿ ಎಂಬುದೇ ಸಾರ್ವಜನಿಕರ ಒಕ್ಕೊರಲಿನ ಅಭಿಪ್ರಾಯವಾಗಿದೆ.

 -ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾ

ಆಂದೋಲನ ಡೆಸ್ಕ್

Recent Posts

ಇಂದಿನಿಂದ ಮೂರು ದಿನ ಸಿಇಟಿ ಪರೀಕ್ಷೆ

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…

12 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 22 ಬುಧವಾರ

37 mins ago

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

12 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

12 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

12 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

13 hours ago