Andolana originals

ಓದುಗರ ಪತ್ರ: ದಸರಾ ದುಬಾರಿಯಾಗದಿರಲಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ಸೆ.೨೨ ರಿಂದ ಆರಂಭವಾಗಿದ್ದು, ಅಕ್ಟೋಬರ್ ೨ ರವರೆಗೆ ಅದ್ಧೂರಿಯಾಗಿ ಜರುಗಲಿದೆ. ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಸುಮಾರು ೬೦ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ ಅನೇಕ ಜನಾಕರ್ಷಣೀಯ ಮತ್ತು ಮನರಂಜನಾ ಕಾರ್ಯಕ್ರಮಗಳ ಪ್ರವೇಶ ಶುಲ್ಕ ದುಬಾರಿಯಾಗಿರುವುದು ಜನರಲ್ಲಿ ಬೇಸರ ತರಿಸಿದೆ. ಈ ಬಾರಿಯೂ ಯುವ ದಸರಾ ವೀಕ್ಷಣೆಗೆ ದರ ನಿಗದಿ ಮಾಡಿದ್ದು, ಟಿಕೆಟ್ ವ್ಯವಸ್ಥೆಯನ್ನು ಮಾಡಲಾಗಿದೆ.

ಒಟ್ಟಾರೆ ೨೦ ಸಾವಿರ ಆಸನಗಳ ವ್ಯವಸ್ಥೆ ಮಾಡಿದ್ದು, ಈ ಪೈಕಿ ೫ ಸಾವಿರ ರೂ. ಟಿಕೆಟ್ ಹಾಗೂ ೨,೫೦೦ ರೂ. ಟಿಕೆಟ್‌ಗಳಿಗೆ ರೂ.೫೦೦ ಆಸನಗಳ ಗ್ಯಾಲರಿಗಳಲ್ಲಿ ಸ್ಥಳ ವ್ಯವಸ್ಥೆಗೊಳಿಸಲಾಗಿದೆ. ಇದಲ್ಲದೆ ಅಂಬಾರಿ ಬಸ್ ಪ್ರಯಾಣ ದರ ರೂ. ೫೦೦, ದಸರಾ ಗೋಲ್ಡ್ ಕಾರ್ಡ್‌ಗೆ ರೂ. ೬,೫೦೦. ಜಂಬೂಸವಾರಿ ವೀಕ್ಷಣೆಗೆ ರೂ.೩,೫೦೦. ಪಂಜಿನ ಕವಾಯತು ವೀಕ್ಷಣೆ ರೂ.೧೫೦೦. ಡ್ರೋನ್ ಶೋಗೆ ರೂ. ೧೫೦೦. ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ರೂ. ೫೦ ನಿಗದಿ ಮಾಡಲಾಗಿದ್ದು ಈ ಬಾರಿಯೂ ದಸರಾ ವೀಕ್ಷಣೆಯು ತುಂಬಾ ದುಬಾರಿಯಾಗಿದೆ ಎಂದು ಜನ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ರಾಜಕೀಯ ಮುಖಂಡರ ಹಿಂಬಾಲಕರಿಗೆ ಮಾತ್ರ ಉಚಿತ ಪಾಸ್‌ಗಳು ದೊರಕುತ್ತಿದ್ದು, ಸಾಮಾನ್ಯ ಜನರಿಗೆ ದಸರಾ ವೀಕ್ಷಣೆ ಅಸಾಧ್ಯವಾಗಿದೆ.

ನಾಡಿನ ವಿವಿಧ ಮೂಲೆಗಳಿಂದ ಆಗಮಿಸುವ ಪ್ರವಾಸಿಗರ ಜೇಬಿಗೆ ಕತ್ತರಿ ಬೀಳುವುದು ಗ್ಯಾರಂಟಿಯಾಗಿದೆ. ಈಗಾಗಲೇ ಟಿಕೆಟ್ ದರದ ಹೆಚ್ಚಳದ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ದಸರಾ ನಡೆಸುವುದು ದುಡ್ಡಿಗಾಗಿಯೇ ಎಂಬ ಮನೋಭಾವನೆ ಸಾರ್ವಜನಿಕರಲ್ಲಿ ಮನೆ ಮಾಡುತ್ತಿದೆ. ಆದ್ದರಿಂದ ಈ ಬಾರಿಯ ದಸರಾವು ದುಬಾರಿಯಾಗದೆ ಜನಸಾಮಾನ್ಯರ ದಸರಾವಾಗಲಿ ಎಂಬುದೇ ಸಾರ್ವಜನಿಕರ ಒಕ್ಕೊರಲಿನ ಅಭಿಪ್ರಾಯವಾಗಿದೆ.

 -ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago