Andolana originals

ಓದುಗರ ಪತ್ರ| ಭಾರತ ಹೆಚ್ಚು ಪದಕಗಳನ್ನು ಗೆದ್ದು ಬರಲಿ

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 33ನೇ ಆವೃತ್ತಿಯ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಶುಭಾರಂಭ ಮಾಡಿದ್ದು, ಹಾಕಿ ತಂಡ ನ್ಯೂಜಿಲ್ಯಾಂಡ್ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ, ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಮನು ಭಾಕರ್ ಪದಕ ಗೆದ್ದಿದ್ದಾರೆ.

ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಭಾಗವಹಿಸುತ್ತಿ ದ್ದಾರೆ. ಕಳೆದ ಆವೃತ್ತಿಯಲ್ಲಿ ಭಾರತದ ಕ್ರೀಡಾಪಟುಗಳು 7 ಪದಕಗಳನ್ನು ಗೆಲ್ಲುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಆವೃತ್ತಿಯಲ್ಲಿ ಅದಕ್ಕಿಂತಲೂ ಅಧಿಕ ಪದಕಗಳನ್ನು ಗೆದ್ದು ಬರಲಿ ಎಂಬುದು ಭಾರತೀಯರ ಆಶಯ. ಭಾರತ ಇತ್ತೀಚಿನ ವರ್ಷಗಳಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಕ್ರೀಡಾಪಟುಗಳಿಗೆ ದೇಶದಲ್ಲಿ ಪೂರಕ ವಾತಾವರಣ ನಿರ್ಮಿಸಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿರುವ ಪರಿಣಾಮ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಸಾಧನೆ ಮಾಡುತ್ತಿದ್ದಾರೆ. ಕಳೆದ ಬಾರಿ ಪದಕ ವಿಜೇತರಾದ ಕ್ರೀಡಾಪಟುಗಳೂ ಈ ಬಾರಿಯ ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಭಾಗಿಯಾಗುತ್ತಿದ್ದು, ಹಿರಿಯ ಆಟಗಾರರ ಸ್ಫೂರ್ತಿಯೊಂದಿಗೆ ಇತರೆ ಆಟಗಾರರೂ ಭಾಗವಹಿಸಿ ಎಲ್ಲ ಕ್ರೀಡೆಗಳಲ್ಲಿಯೂ ಪದಕಗಳನ್ನು ಗೆದ್ದು ಬರಲಿ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

23 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago