Andolana originals

ಓದುಗರ ಪತ್ರ| ಭಾರತ ಹೆಚ್ಚು ಪದಕಗಳನ್ನು ಗೆದ್ದು ಬರಲಿ

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ 33ನೇ ಆವೃತ್ತಿಯ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಶುಭಾರಂಭ ಮಾಡಿದ್ದು, ಹಾಕಿ ತಂಡ ನ್ಯೂಜಿಲ್ಯಾಂಡ್ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ, ಪಿಸ್ತೂಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಮನು ಭಾಕರ್ ಪದಕ ಗೆದ್ದಿದ್ದಾರೆ.

ಈ ಕ್ರೀಡಾಕೂಟದಲ್ಲಿ ಭಾರತದ 117 ಕ್ರೀಡಾಪಟುಗಳು ಭಾಗವಹಿಸುತ್ತಿ ದ್ದಾರೆ. ಕಳೆದ ಆವೃತ್ತಿಯಲ್ಲಿ ಭಾರತದ ಕ್ರೀಡಾಪಟುಗಳು 7 ಪದಕಗಳನ್ನು ಗೆಲ್ಲುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಆವೃತ್ತಿಯಲ್ಲಿ ಅದಕ್ಕಿಂತಲೂ ಅಧಿಕ ಪದಕಗಳನ್ನು ಗೆದ್ದು ಬರಲಿ ಎಂಬುದು ಭಾರತೀಯರ ಆಶಯ. ಭಾರತ ಇತ್ತೀಚಿನ ವರ್ಷಗಳಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಕ್ರೀಡಾಪಟುಗಳಿಗೆ ದೇಶದಲ್ಲಿ ಪೂರಕ ವಾತಾವರಣ ನಿರ್ಮಿಸಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿರುವ ಪರಿಣಾಮ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಸಾಧನೆ ಮಾಡುತ್ತಿದ್ದಾರೆ. ಕಳೆದ ಬಾರಿ ಪದಕ ವಿಜೇತರಾದ ಕ್ರೀಡಾಪಟುಗಳೂ ಈ ಬಾರಿಯ ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಭಾಗಿಯಾಗುತ್ತಿದ್ದು, ಹಿರಿಯ ಆಟಗಾರರ ಸ್ಫೂರ್ತಿಯೊಂದಿಗೆ ಇತರೆ ಆಟಗಾರರೂ ಭಾಗವಹಿಸಿ ಎಲ್ಲ ಕ್ರೀಡೆಗಳಲ್ಲಿಯೂ ಪದಕಗಳನ್ನು ಗೆದ್ದು ಬರಲಿ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

2 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

16 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

17 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

18 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

18 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

19 hours ago