Andolana originals

ಓದುಗರ ಪತ್ರ: ಭವಿಷ್ಯದಲ್ಲಿ ಇಂತಹ ಕಹಿ ಘಟನೆಗಳು ಮರುಕಳಿಸದಿರಲಿ

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ಆಚರಣೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟು, ನೂರಾರು ಜನ ಗಾಯಗೊಂಡ ಪ್ರಕರಣ ಹೃದಯ ವಿದ್ರಾವಕವಾಗಿದೆ. ರಾಜ್ಯಸರ್ಕಾರದ ವಿಫಲತೆಯೇ ಇಂತಹ ದುರ್ಘಟನೆ ನಡೆಯಲು ಕಾರಣವೆಂದು ಯಥಾಪ್ರಕಾರ ವಿರೋಧ ಪಕ್ಷಗಳು ಟೀಕಿಸಿವೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಹತ್ತು ಲಕ್ಷ ರೂಪಾಯಿಗಳ ಪರಿಹಾರವನ್ನು ರಾಜ್ಯಸರ್ಕಾರ ಈಗಾಗಲೇ ಘೋಷಿಸಿದ್ದು, ಇಡೀ ಘಟನೆಯನ್ನು ವಿಚಾರಣೆಗೆ ಒಳಪಡಿಸಲು ನ್ಯಾ.ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕವ್ಯಕ್ತಿ ಆಯೋಗವನ್ನು ರಚಿಸಿದೆ. ಘಟನೆ ತುಂಬಾ ಗಂಭೀರವಾಗಿರುವುದರಿಂದ ರಾಜ್ಯಸರ್ಕಾರ ಬೆಂಗಳೂರಿನ ಪೊಲೀಸ್ ಆಯುಕ್ತರಾದ ದಯಾನಂದ್ ಸೇರಿದಂತೆ ಕೆಲವು ಮುಖ್ಯ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದೆ. ಜೊತೆಗೆ ಎಫ್‌ಐಆರ್ ಆಧಾರದ ಮೇಲೆ ಸಿಐಡಿ ತನಿಖೆಗೂ ಆದೇಶಿಸಲಾಗಿದೆ. ಈ ಮಧ್ಯೆ ಈ ಪ್ರಕರಣದ ಬಗ್ಗೆ ಸ್ವಯಂಪ್ರೇರಿತ ದೂರನ್ನು ದಾಖಲಿಸಿಕೊಂಡಿರುವ ರಾಜ್ಯದ ಉಚ್ಚ ನ್ಯಾಯಾಲಯ, ರಾಜ್ಯಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಮತ್ತೊಂದು ಕಡೆ, ಈ ಪ್ರಕರಣದಲ್ಲಿ ಬಹುತೇಕರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ. ಈ ದುರ್ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದಾರೆ. ಯಾರು ಏನೇ ಹೇಳಿದರೂ, ಟೀಕೆ ಮಾಡಿದರೂ ಆಗಬಾರದ್ದು ಆಗಿಹೋಗಿದೆ. ಸತ್ತವರನ್ನು ಬದುಕಿಸುವ ಸಾಮರ್ಥ್ಯ ಯಾರಲ್ಲೂ ಇಲ್ಲ. ಆದರೂ ಇಂತಹ ಸಂದರ್ಭಗಳಲ್ಲಿ ಕಠಿಣ ಮತ್ತು ಕಠೋರವಾದ ಮಾತುಗಳು ಬರುವುದು ಸಹಜ. ಘಟನೆಯ ಬಗ್ಗೆ ಈಗಾಗಲೇ ತನಿಖೆಗೆ ಆದೇಶ ಮಾಡಿರುವುದರಿಂದ ತಪ್ಪಿತಸ್ಥರ ಮೇಲೆ ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ. ರಾಜ್ಯ ಸರ್ಕಾರ ಇನ್ನು ಮುಂದಾದರೂ ಎಚ್ಚೆತ್ತುಕೊಂಡು ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುವುದು ಒಳ್ಳೆಯದು.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿಯಲ್ಲಿ ಕ್ರಿಸ್‌ಮಸ್ ಸಂಭ್ರಮ

ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…

3 mins ago

ರಾಗಿ, ಹುರುಳಿ ಒಕ್ಕಣೆಗೆ ರಸ್ತೆಯೇ ಕಣ!

ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…

8 mins ago

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

11 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

11 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

11 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

12 hours ago