Andolana originals

ಓದುಗರ ಪತ್ರ: ಭವಿಷ್ಯದಲ್ಲಿ ಇಂತಹ ಕಹಿ ಘಟನೆಗಳು ಮರುಕಳಿಸದಿರಲಿ

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ಆಚರಣೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟು, ನೂರಾರು ಜನ ಗಾಯಗೊಂಡ ಪ್ರಕರಣ ಹೃದಯ ವಿದ್ರಾವಕವಾಗಿದೆ. ರಾಜ್ಯಸರ್ಕಾರದ ವಿಫಲತೆಯೇ ಇಂತಹ ದುರ್ಘಟನೆ ನಡೆಯಲು ಕಾರಣವೆಂದು ಯಥಾಪ್ರಕಾರ ವಿರೋಧ ಪಕ್ಷಗಳು ಟೀಕಿಸಿವೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ಹತ್ತು ಲಕ್ಷ ರೂಪಾಯಿಗಳ ಪರಿಹಾರವನ್ನು ರಾಜ್ಯಸರ್ಕಾರ ಈಗಾಗಲೇ ಘೋಷಿಸಿದ್ದು, ಇಡೀ ಘಟನೆಯನ್ನು ವಿಚಾರಣೆಗೆ ಒಳಪಡಿಸಲು ನ್ಯಾ.ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕವ್ಯಕ್ತಿ ಆಯೋಗವನ್ನು ರಚಿಸಿದೆ. ಘಟನೆ ತುಂಬಾ ಗಂಭೀರವಾಗಿರುವುದರಿಂದ ರಾಜ್ಯಸರ್ಕಾರ ಬೆಂಗಳೂರಿನ ಪೊಲೀಸ್ ಆಯುಕ್ತರಾದ ದಯಾನಂದ್ ಸೇರಿದಂತೆ ಕೆಲವು ಮುಖ್ಯ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದೆ. ಜೊತೆಗೆ ಎಫ್‌ಐಆರ್ ಆಧಾರದ ಮೇಲೆ ಸಿಐಡಿ ತನಿಖೆಗೂ ಆದೇಶಿಸಲಾಗಿದೆ. ಈ ಮಧ್ಯೆ ಈ ಪ್ರಕರಣದ ಬಗ್ಗೆ ಸ್ವಯಂಪ್ರೇರಿತ ದೂರನ್ನು ದಾಖಲಿಸಿಕೊಂಡಿರುವ ರಾಜ್ಯದ ಉಚ್ಚ ನ್ಯಾಯಾಲಯ, ರಾಜ್ಯಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಮತ್ತೊಂದು ಕಡೆ, ಈ ಪ್ರಕರಣದಲ್ಲಿ ಬಹುತೇಕರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ತಿಳಿಸಿದೆ. ಈ ದುರ್ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದಾರೆ. ಯಾರು ಏನೇ ಹೇಳಿದರೂ, ಟೀಕೆ ಮಾಡಿದರೂ ಆಗಬಾರದ್ದು ಆಗಿಹೋಗಿದೆ. ಸತ್ತವರನ್ನು ಬದುಕಿಸುವ ಸಾಮರ್ಥ್ಯ ಯಾರಲ್ಲೂ ಇಲ್ಲ. ಆದರೂ ಇಂತಹ ಸಂದರ್ಭಗಳಲ್ಲಿ ಕಠಿಣ ಮತ್ತು ಕಠೋರವಾದ ಮಾತುಗಳು ಬರುವುದು ಸಹಜ. ಘಟನೆಯ ಬಗ್ಗೆ ಈಗಾಗಲೇ ತನಿಖೆಗೆ ಆದೇಶ ಮಾಡಿರುವುದರಿಂದ ತಪ್ಪಿತಸ್ಥರ ಮೇಲೆ ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ. ರಾಜ್ಯ ಸರ್ಕಾರ ಇನ್ನು ಮುಂದಾದರೂ ಎಚ್ಚೆತ್ತುಕೊಂಡು ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುವುದು ಒಳ್ಳೆಯದು.

-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

2 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

2 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

12 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

16 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

17 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

18 hours ago