ಹೊಸ ವರ್ಷ ಎಲ್ಲರಿಗೂ ಹರುಷ ತರಲಿ, ಎಲ್ಲರ ನೋವುಗಳನ್ನು ದೂರ ಮಾಡಲಿ. 2024ರಲ್ಲಿ ಭಾರತ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ್ದರೂ ಸಾಕಷ್ಟು ಕರಾಳ ಘಟನೆಗಳಿಗೂ ಸಾಕ್ಷಿಯಾಗಿದೆ. ದೇಶದ ನಾನಾ ಭಾಗಗಳಲ್ಲಿ ನಡೆದ ರೈಲು ಅಪಘಾತ ಗಳು ನೂರಾರು ಮಂದಿಯನ್ನು ಬಲಿ ಪಡೆದರೆ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಹತ್ತಾರು ಗ್ರಾಮಗಳೇ ಕೊಚ್ಚಿ ಹೋಗಿ, ನೂರಾರು ಮಂದಿ ಜೀವ, ಜೀವನ ಕಳೆದುಕೊಂಡಿದ್ದಾರೆ.
ಉತ್ತರ ಕರ್ನಾಟಕ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿ ೧೧ ಮಂದಿ ಜೀವ ಕಳೆದುಕೊಂಡರು. ಇದಲ್ಲದೆ ಸತ್ಸಂಗದಲ್ಲಿ ಕಾಲ್ತುಳಿತದ ದುರಂತ, ದಿ ರಾಮೇಶ್ವರಂ ಕೆಫೆ ಸ್ಛೋಟ ಸೇರಿದಂತೆ ಅನೇಕ ಕರಾಳ ಅಧ್ಯಾಯಗಳಿಗೆ 2024 ಸಾಕ್ಷಿಯಾಗಿದೆ.
ಇನ್ನು ರತನ್ ಟಾಟಾ, ಪ. ರಾಜೀವ ತಾರಾನಾಥ್, ಸಂಸದ ವಿ. ಶ್ರೀನಿವಾಸ ಪ್ರಸಾದ್, ಕನ್ನಡದ ಖ್ಯಾತ ನಿರೂಪಕಿ ಅಪರ್ಣ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ, ತಬಲ ವಾದಕ ಜಾಕೀರ್ ಹುಸೇನ್ ರಂತಹ ಮಹನೀಯರು ಇಹಲೋಕ ತ್ಯಜಿಸಿದ್ದಾರೆ. ೨೦೨೪ರಲ್ಲಿ ಕ್ರೀಡೆಯಲ್ಲಿ ಭಾರತ ಅತ್ಯುತ್ತಮ ಸಾಧನೆ ಮಾಡಿದೆ. ಕ್ರಿಕೆಟ್ ಟಿ-20 ವಿಶ್ವಕಪ್ ಚಾಂಪಿಯನ್ ಆಗುವ ಜತೆಗೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳು ಅನೇಕ ಪದಕಗಳನ್ನು ಗೆದ್ದು ಬೀಗಿದರು. ಅಲ್ಲದೆ ವಿಶ್ವದ ಅತ್ಯಂತ ಕಿರಿಯ ಚೆಸ್ ಚಾಂಪಿಯನ್ಯಾಗಿ ಡಿ. ಗುಕೇಶ್ ಹೊರ ಹೊಮ್ಮಿದ್ದು, ಭಾರತಕ್ಕೆ ಹೆಮ್ಮೆಯ ವಿಚಾರ. ೨೦೨೫ರಲ್ಲಿಯೂ ದೇಶ ಸಾಧನೆಯ ಹಾದಿಯಲ್ಲಿ ಸಾಗಲಿ ಎಂದು ಹಾರೈಸೋಣ.
-ಎಸ್. ಪ್ರಶಾಂತ್, ಅಂತರಸಂತೆ, ಎಚ್. ಡಿ. ಕೋಟೆ ತಾ.
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…