Andolana originals

ಓದುಗರ ಪತ್ರ: ಹೊಸ ವರ್ಷ ತರಲಿ ಹರುಷ

ಹೊಸ ವರ್ಷ ಎಲ್ಲರಿಗೂ ಹರುಷ ತರಲಿ, ಎಲ್ಲರ ನೋವುಗಳನ್ನು ದೂರ ಮಾಡಲಿ. 2024ರಲ್ಲಿ ಭಾರತ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ್ದರೂ ಸಾಕಷ್ಟು ಕರಾಳ ಘಟನೆಗಳಿಗೂ ಸಾಕ್ಷಿಯಾಗಿದೆ. ದೇಶದ ನಾನಾ ಭಾಗಗಳಲ್ಲಿ ನಡೆದ ರೈಲು ಅಪಘಾತ ಗಳು ನೂರಾರು ಮಂದಿಯನ್ನು ಬಲಿ ಪಡೆದರೆ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಹತ್ತಾರು ಗ್ರಾಮಗಳೇ ಕೊಚ್ಚಿ ಹೋಗಿ, ನೂರಾರು ಮಂದಿ ಜೀವ, ಜೀವನ ಕಳೆದುಕೊಂಡಿದ್ದಾರೆ.

ಉತ್ತರ ಕರ್ನಾಟಕ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿ ೧೧ ಮಂದಿ ಜೀವ ಕಳೆದುಕೊಂಡರು. ಇದಲ್ಲದೆ ಸತ್ಸಂಗದಲ್ಲಿ ಕಾಲ್ತುಳಿತದ ದುರಂತ, ದಿ ರಾಮೇಶ್ವರಂ ಕೆಫೆ ಸ್ಛೋಟ ಸೇರಿದಂತೆ ಅನೇಕ ಕರಾಳ ಅಧ್ಯಾಯಗಳಿಗೆ 2024 ಸಾಕ್ಷಿಯಾಗಿದೆ.

ಇನ್ನು ರತನ್ ಟಾಟಾ, ಪ. ರಾಜೀವ ತಾರಾನಾಥ್, ಸಂಸದ ವಿ. ಶ್ರೀನಿವಾಸ ಪ್ರಸಾದ್, ಕನ್ನಡದ ಖ್ಯಾತ ನಿರೂಪಕಿ ಅಪರ್ಣ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ, ತಬಲ ವಾದಕ ಜಾಕೀರ್ ಹುಸೇನ್ ರಂತಹ ಮಹನೀಯರು ಇಹಲೋಕ ತ್ಯಜಿಸಿದ್ದಾರೆ. ೨೦೨೪ರಲ್ಲಿ ಕ್ರೀಡೆಯಲ್ಲಿ ಭಾರತ ಅತ್ಯುತ್ತಮ ಸಾಧನೆ ಮಾಡಿದೆ. ಕ್ರಿಕೆಟ್ ಟಿ-20 ವಿಶ್ವಕಪ್ ಚಾಂಪಿಯನ್ ಆಗುವ ಜತೆಗೆ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅನೇಕ ಪದಕಗಳನ್ನು ಗೆದ್ದು ಬೀಗಿದರು. ಅಲ್ಲದೆ ವಿಶ್ವದ ಅತ್ಯಂತ ಕಿರಿಯ ಚೆಸ್ ಚಾಂಪಿಯನ್‌ಯಾಗಿ ಡಿ. ಗುಕೇಶ್ ಹೊರ ಹೊಮ್ಮಿದ್ದು, ಭಾರತಕ್ಕೆ ಹೆಮ್ಮೆಯ ವಿಚಾರ. ೨೦೨೫ರಲ್ಲಿಯೂ ದೇಶ ಸಾಧನೆಯ ಹಾದಿಯಲ್ಲಿ ಸಾಗಲಿ ಎಂದು ಹಾರೈಸೋಣ.

-ಎಸ್. ಪ್ರಶಾಂತ್, ಅಂತರಸಂತೆ, ಎಚ್. ಡಿ. ಕೋಟೆ ತಾ.

 

andolana

Recent Posts

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

1 hour ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

2 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

5 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

9 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

10 hours ago