ಓದುಗರ ಪತ್ರ
ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವ ಅಂಶ ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಾಲಯಗಳಲ್ಲಿಯೂ ನಂದಿನಿ ತುಪನ್ನೇ ಬಳಸಿ ಪ್ರಸಾದ ತಯಾರಿಸುವಂತೆ ಇಲಾಖೆ ಸುತ್ತೋಲೆ ಹೊರಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದೊಂದು ಸ್ವಾಗತಾರ್ಹ ಕ್ರಮ. ಕೆಲ ದಿನಗಳ ಹಿಂದೆ ನಾವು ಮಹದೇಶ್ವರ ಬೆಟ್ಟಕ್ಕೆ ಪ್ರವಾಸಕ್ಕೆಂದು ತೆರಳಿದ್ದಾಗ ಲಾಡು ಖರೀದಿಸಿ ತಂದಿದ್ದೆ. ಆದರೆ ಆ ಲಾಡು ಮನೆಗೆ ತರುವ ವೇಳೆಗಾಗಲೇ ಕಡ್ಲೆಹಿಟ್ಟಿನ ಉಂಡೆಯಂತಾಗಿದ್ದು, ಅದನ್ನು ತಯಾರಿಸಿ ಸಾಕಷ್ಟು ದಿನಗಳಾಗಿರಬಹುದು ಎಂಬ ಅನುಮಾನ ಕಾಡಿತ್ತು. 25 ರೂ. ನೀಡಿ ಖರೀದಿಸಿದ ಲಾಡು ಪೊಟ್ಟಣದ ಮೇಲೆ ಅದರ ದರವಾಗಲಿ, ತಯಾರಿಸಿದ ದಿನಾಂಕವನ್ನಾಗಲಿ ನಮೂದಿಸಿರಲಿಲ್ಲ. ಇದು ಕೇವಲ ಮಹದೇಶ್ವರ ಬೆಟ್ಟದಲ್ಲಿ ಮಾತ್ರವಲ್ಲ. ಚಾಮುಂಡಿಬೆಟ್ಟ, ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನಗಳಲ್ಲೂ ಇದೇ ಪರಿಸ್ಥಿತಿ ಇದೆ. ಎಲ್ಲ ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಯನ್ನು ಗುತ್ತಿಗೆಗೆ ವಹಿಸುತ್ತಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಇಲಾಖೆ ಸೂಚನೆ ನೀಡಬೇಕಿದೆ.
-ಬಿ.ಎಂ.ಭ್ರಮರಾಂಬ, ಕನಕದಾಸನಗರ, ಮೈಸೂರು.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…