ಓದುಗರ ಪತ್ರ
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸರವರ ಈ ಪರಿಕಲ್ಪನೆ ನಿಜಕ್ಕೂ ವಿನೂತನ. ರಾಜ್ಯದಲ್ಲಿ ಕನಿಷ್ಠ ಒಂದು ಲಕ್ಷ ಮನೆಗಳದರೂ ಮನೆಗೊಂದು ಗ್ರಂಥಾಲಯ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಆಸಕ್ತಿ ವಹಿಸಿರುವುದು ಕನ್ನಡ ಸಾಹಿತಿಗಳು ಮತ್ತು ಪ್ರಕಾಶಕರಿಗೆ ಆರ್ಥಿಕವಾಗಿ ಉತ್ತೇಜನಕಾರಿ. ಈ ಕಾರ್ಯಕ್ರಮದಡಿ ಈಗಾಗಲೇ ರಾಜ್ಯದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇದು ಕಳೆದ ವರ್ಷ ಪ್ರಥಮ ಬಾರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯ ಪ್ರಾರಂಭಗೊಂಡಿತು. ನಾವು ಮನೆ ಕಟ್ಟುವಾಗ ದೇವರಿಗೊಂದು ಕೋಣೆ ನಿರ್ಮಾಣ ಮಾಡಿದಂತೆ, ಗ್ರಂಥಾಲಯಕ್ಕೊಂದು ಸೂಕ್ತ ವ್ಯವಸ್ಥೆ ಮಾಡಿದರೆ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಿದಂತಾಗುತ್ತದೆ. ಗ್ರಂಥಾಲಯದ ಪರಿಕಲ್ಪನೆ ಮನೆಯಿಂದಲೇ ಪ್ರಾರಂಭವಾಗಬೇಕು. ಪ್ರಾಧಿಕಾರದ ಈ ಯೋಜನೆ ಯಶಸ್ವಿಯಾಗಲಿ.
– ಬೂಕನಕೆರೆ ವಿಜೇಂದ್ರ, ಮೈಸೂರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…